
ಹಾಲಿ ಶಾಸಕ ಲಕ್ಷ್ಮಣ ಸವದಿ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಖಚಿತ. ಅವರಿಗೆ ದಿಗ್ಬಂಧನ ಹಾಕಲು ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರಿಗೆ ಖಾದಿ ತೊಡಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಸ್ವಾಮೀಜಿ ಕೂಡ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ರಾಜಕೀಯ- ಧರ್ಮ ಯುದ್ಧ ಇಲ್ಲಿ ನಡೆಯಲಿದೆ. ಬಿಜೆಪಿಯನ್ನು ಸದೆಬಡಿಯಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ.
ಕಾಂಗ್ರೆಸ್-ಬಿಜೆಪಿ ನಡುವೆಯೇ ತುರುಸಿನ ಸ್ಪರ್ಧೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಹಾಗಂತ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಎದುರಿಸುವುದು ಅಷ್ಟು ಸುಲಭದ ಮಾತೂ ಅಲ್ಲ. ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸ ಮತ್ತು ಮತದಾರರೊಂದಿಗಿನ ನಂಟು ಸವದಿ ಗೆಲುವಿನ ಗುಟ್ಟು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.