ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ಲಾನ್

Published : Sep 08, 2018, 01:27 PM ISTUpdated : Sep 09, 2018, 10:26 PM IST
ಲೋಕಸಭೆ ಚುನಾವಣೆಗೆ  ಕಾಂಗ್ರೆಸ್ ಪ್ಲಾನ್

ಸಾರಾಂಶ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್‌ ಪಕ್ಷ, ಮತ್ತೊಂದು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತನ್ನ ಬೊಕ್ಕಸಕ್ಕೆ ದೇಣಿಗೆ ಸಂಗ್ರಹಿಸಲು ಮತದಾರರ ಮನೆಬಾಗಿಲಿಗೆ ತೆರಳಲು ನಿರ್ಧರಿಸಿದೆ.

ನವದೆಹಲಿ: 2014ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್‌ ಪಕ್ಷ, ಮತ್ತೊಂದು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತನ್ನ ಬೊಕ್ಕಸಕ್ಕೆ ದೇಣಿಗೆ ಸಂಗ್ರಹಿಸಲು ಮತದಾರರ ಮನೆಬಾಗಿಲಿಗೆ ತೆರಳಲು ನಿರ್ಧರಿಸಿದೆ.

ಜನರಿಂದ ನೇರವಾಗಿ ದೇಣಿಗೆ ಸಂಗ್ರಹಿಸುವ ಸಲುವಾಗಿ ದೇಶಾದ್ಯಂತ 40 ದಿನಗಳ ಸಂಪರ್ಕ ಆಂದೋಲನವನ್ನು ಹಮ್ಮಿಕೊಂಡಿದೆ. ಗುರುವಾರ ದೆಹಲಿಯಲ್ಲಿ ಎಐಸಿಸಿ ಪದಾಧಿಕಾರಿಗಳು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರು, ಖಜಾಂಚಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನಾಯಕರು ದೇಶಾದ್ಯಂತ ಇರುವ ಎಲ್ಲ ಬೂತ್‌ಗಳ ವ್ಯಾಪ್ತಿಯ ಪ್ರತಿ ಮನೆಗೂ ತೆರಳಿ ದೇಣಿಗೆ ಸಂಗ್ರಹಿಸಲಿದ್ದಾರೆ. ಬಾರ್‌ ಕೋಡ್‌ ಹಾಗೂ ಸಂಖ್ಯೆ ಹೊಂದಿರುವ ಕೂಪನ್‌ಗಳನ್ನು ಹಣ ಕೊಟ್ಟವರಿಗೆ ನೀಡಲಿದ್ದಾರೆ. ಜತೆಗೆ ದಾನಿಗಳ ಹೆಸರು, ಮೊಬೈಲ್‌ ದೂರವಾಣಿ ಸಂಖ್ಯೆಯನ್ನೂ ಸಂಗ್ರಹಿಸಲಾಗುತ್ತದೆ. ಇದರಿಂದ ದೇಣಿಗೆ ಸಂಗ್ರಹ ಜತೆಗೆ ಮತದಾರರ ಬೃಹತ್‌ ಡೇಟಾಬೇಸ್‌ ಕೂಡ ಸಿದ್ಧವಾದಂತಾಗಲಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರೊಬ್ಬರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ