
ಬೆಂಗಳೂರು [ಜು.22] : ರಾಜ್ಯ ರಾಜಕೀಯ ಡ್ರಾಮಾ ಹಲವು ದಿನಗಳಿಂದ ನಡೆಯುತ್ತಿದ್ದು, ಸರ್ಕಾರ ವಿಶ್ವಾಸ ಮತ ಯಾಚನೆಗೆ ಮುಂದಾಗಿದೆ. ಇದೇ ವೇಳೆ ಕಲಾಪದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಗಳ ಸುರಿಮಳೆಯಾಗುತ್ತಿದೆ.
ಅತೃಪ್ತರಾಗಿ ಮುಂಬೈಗೆ ತೆರಳಿರುವ ಮೈತ್ರಿ ಪಾಳಯದ ಶಾಸಕರ ಜೊತೆ ಬಿಜೆಪಿ ಸಂಪರ್ಜದಲ್ಲಿ ಇದೆ. ಇದು ಸ್ಪಷ್ಟ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ನೇರವಾಗಿ ಆರೋಪಿಸಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಧಾನಸಭೆ ಚುನಾವಣೆ ನಡೆದ ದಿನದಿಂದಲೂ ಅತೃಪ್ತ ನಾಯಕ ಎಂದೇ ಗುರುತಿಸಿಕೊಂಡ ರಮೇಶ್ ಜಾರಕಿಹೊಳಿ ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಲೋಕಸಭಾ ಚುನಾವಣೆ ವೇಳೆಯೂ ಕೂಡ ಬಿಜೆಪಿ ಜೊತೆಗೆ ರಮೇಶ್ ಜಾರಕಿಹೊಳಿ ಗುರುತಿಸಿಕೊಂಡಿದ್ದರು. ಈಗ ಹಲವು ಮೈತ್ರಿ ಪಾಳಯದ ಶಾಸಕರನ್ನು ಒಗ್ಗೂಡಿಸಿ ಮುಂಬೈಗೆ ತೆರಳಿ ಬಿಜೆಪಿ ನಾಯಕರೊಂದಿಗೆ ನಂಟು ಹೊಂದಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.