ರಮೇಶ್ ಜಾರಕಿಹೊಳಿ ಆಟ ಶುರು, ದಿಢೀರ್ ರಾಜೀನಾಮೆ ಕೊಟ್ಟ ಇಬ್ಬರು ಅಧ್ಯಕ್ಷರು..!

Published : May 06, 2019, 09:47 PM ISTUpdated : May 06, 2019, 09:50 PM IST
ರಮೇಶ್ ಜಾರಕಿಹೊಳಿ ಆಟ ಶುರು, ದಿಢೀರ್ ರಾಜೀನಾಮೆ ಕೊಟ್ಟ ಇಬ್ಬರು ಅಧ್ಯಕ್ಷರು..!

ಸಾರಾಂಶ

ರಮೇಶ್ ಜಾರಕಿಹೊಳಿ ಶತಾಯ ಗತಾಯ ಕರ್ನಾಟಕದಲ್ಲಿ ಸರ್ಕಾರ ಕೆಡವಲೇಬೇಕು ಎಂದು ನಿರ್ಧರಿಸಿದಂತಿದೆ. ಯಾಕಂದ್ರೆ ತಮ್ಮ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ.

ಬೆಳಗಾವಿ, [ಮೇ.06]: ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಮಂತ್ರಿಯಾಗಿದ್ದಷ್ಟು ಕಾಲ ಶಾಂತಿಯ ಮಂತ್ರ ಜಪಿಸುತ್ತಿದ್ದ ರಮೇಶ್ ಜಾರಕಿಹೊಳಿ, ಮಂತ್ರಿಗಿರಿ ಕಸಿದುಕೊಳ್ಳುತ್ತಿದ್ದಂತೆಯೇ ಮೈತ್ರಿ ಸರ್ಕಾರವನ್ನು ಕೆಡುವಲು ಟೊಂಕ ಕಟ್ಟಿ ನಿಂತಿದ್ದಾರೆ. ತಮ್ಮ ಸ್ವ ಕ್ಷೇತ್ರದಿಂದಲೇ ಕಾರ್ಯಚರಣೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ನಂತರ ದೊಡ್ಡ ಬದಲಾವಣೆ ಕಾದಿದೆ ಎನ್ನುತ್ತಲೇ ಫೀಲ್ಡ್ ಗೆ ಎಂಟ್ರಿ ಕೊಟ್ಟಿದ್ದು, ಶಾಸಕ ರಮೇಶ್ ಜಾರಕಿಹೊಳಿ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಎರಡು ಗ್ರಾಮ ಪಂಚಾಯಿತಿದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ.

ಗೋಕಾಕ್ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಿಂದಿಕುರಬೇಟ ಗ್ರಾಮ ಪಂಚಾಯತಿ ಅಧ್ಯಕ್ಷ ಮೊಹಮ್ಮದ್ ರಫಿಕ್ ಮಕಾಂದಾರ್ ಮತ್ತು ಲೋಳಸೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ರತ್ನವ್ವಾ ಕಿಲಾರಿ ರಾಜೀನಾಮೆ ನೀಡಿದ್ದಾರೆ.

ಬೈಲಹೊಂಗಲ ಎಸಿ ಮಾರುತಿ ಅವರಿಗೆ ಇಂದು [ಸೋಮವಾರ] 2 ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ರಾಜೀನಾಮೆ ನೀಡಿರುವುದು ಅಚ್ಚರಿ ಬೆಳವಣಿಗೆಗೆ ಕಾರಣವಾಗಿದೆ.

ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಗ್ರಾಮ ಪಂಚಾಯಿತಿಗಳಿಂದಲೇ ಕಾರ್ಯಚರಣೆ ಶುರು ಮಾಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!