
ನವದೆಹಲಿ (ಜ.09): ಪಂಚರಾಜ್ಯಗಳಲ್ಲಿ ಮುಕ್ತ ಹಾಗೂ ಪಾರದರ್ಶಿಕವಾಗಿ ಚುನಾವಣೆ ನಡೆಸಲು ಈ ರಾಜ್ಯಗಳಲ್ಲಿ ಪ್ರಧಾನಿ ಮೋದಿಯವರ ಪೋಸ್ಟರ್ ಗಳನ್ನು ತೆಗೆದು ಹಾಕಿಸಿ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಕೇಳಿಕೊಂಡಿದೆ.
ಬಹುತೇಕ ಪೆಟ್ರೋಲ್ ಬಂಕ್ ಗಳಲ್ಲಿ ಅಡುಗೆ ಅನಿಲ ವಿತರಣೆ ಸಂಬಂಧಿಸಿದಂತೆ ಮೋದಿಯವರ ಪೋಸ್ಟರ್ ಗಳನ್ನು ಹಾಕಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ರೀತಿ ಜಾಹಿರಾತುಗಳಿಗೆ ಅವಕಾಶವಿಲ್ಲ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಹೇಳಿದೆ.
ಪಂಚರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ದಿನದಿಂದ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.