
ಹೈದರಾಬಾದ್[ಡಿ.03] ಕರ್ನಾಟಕ ವಿಧಾನಸಭೆ ಚುನಾವಣೆಗೂ ಮೊದಲು ರಾಹುಲ್ ಗಾಂಧಿ ಅವರು, ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಂ ಎಂದಿದ್ದರು. ಆದರೆ, ಚುನಾವಣೆ ನಂತರ ಏನಾಯ್ತು? ಕಾಂಗ್ರೆಸ್ ಹೇಗೆ ನಡೆದುಕೊಂಡಿತು? ಯಾರೊಂದಿಗೆ ಅಧಿಕಾರ ಮಾಡಿತು? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮೊದಲು ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಂ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರೆದಿದ್ದರು. ಈಗ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಅವರಿಬ್ಬರೂ ಸೇರಿ ಸರ್ಕಾರ ಮಾಡುತ್ತಿದ್ದಾರೆ. ತೆಲಂಗಾಣದಲ್ಲೂ ಅಷ್ಟೇ, ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಈ ಸಮಯದಲ್ಲಿ ಮಾತ್ರ ಹೋರಾಟ ಎಂದು ತೋರಿಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ತೆಲಂಗಾಣ ಚುನಾವಣೆ ಪ್ರಚಾರ ಕೈಗೊಂಡಿದ್ದ ರಾಹುಲ್ ಗಾಂಧಿ ಚಂದ್ರಶೇಖರ್ ರಾವ್ ಅವರ ನೇತೃತ್ವದ ಟಿಆರ್ಎಸ್ ಬಿಜೆಪಿಯ ‘ಬಿ’ ಟೀಂ,ಎಂದು ಕರೆದಿದ್ದರು. ಅದಕ್ಕೂ ಹಿಂದೆ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಂ ಎಂದಿದ್ದರು. ಆದರೆ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶ ಎದುರಾದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿ ದೋಸ್ತಿ ಸರ್ಕಾರ ನಡೆಸುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.