
ನವವದೆಹಲಿ (ಅ.13): ಮುಸ್ಲೀಮರನ್ನು ಉದ್ದೇಶವಾಗಿಟ್ಟುಕೊಂಡು ದೇಶದಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಬೇಕು ಎನ್ನುವ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದಿದೆ.
ಈ ಮೂಲಕ ಪ್ರಗತಿಪರ ಸಮಾಜದ ಗುರಿ ಇಟ್ಟುಕೊಂಡಿದೆ ಎನ್ನುವ ಬಿಜೆಪಿ ಕೆಲವು ರಾಜ್ಯಗಳಲ್ಲಿ ಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ವಿರೋಧಪಕ್ಷಗಳು ಟೀಕಿಸಿವೆ.
ಎಂಐಎಂ ಪಕ್ಷದ ನಾಯಕ ಅಸಾವುದ್ದೀನ್ ಓವೈಸಿ, ಏಕರೂಪ ವಸ್ತ್ರ ಸಂಹಿತೆ ಜಾರಿಗೆ ತರುವುದರಿಂದ ದೇಶದಲ್ಲಿನ ವೈವಿಧ್ಯತೆಯನ್ನು ಸಾಯಿಸಿದಂತಾಗುತ್ತದೆ ಎಂದಿದ್ದಾರೆ.
“ ಒಂದು ವೇಳೆ ಏಕರೂಪ ವಸ್ತ್ರ ಸಂಹಿತೆ ಹೆಸರಿನಲ್ಲಿ ಒತ್ತಾಯ ಮಾಡಿದರೆ ದೇಶದ ವೈವಿಧ್ಯತೆಯನ್ನು ಸಾಯಿಸಿದಂತಾಗುತ್ತದೆ. ಮುಸ್ಲೀಮರ ದೃಷ್ಟಿಕೋನದಿಂದ ನೋಡಿದರೆ ಇದು ಸರಿಯಲ್ಲ. ದಲಿತ ಮತ್ತು ಬುಡಕಟ್ಟು ಸಮುದಾಯದಲ್ಲಿಯೂ ಸಹ ವಸ್ತ್ರ ವೈವಿಧ್ಯವಿದೆ. ಹಿಂದೂಗಳಲ್ಲಿಯೂ ಸಹ ವಿಭಿನ್ನ ಸಂಪ್ರದಾಯಗಳಿವೆ" ಎಂದು ಓವೈಸಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.