
ಬೆಳಗಾವಿ, [ಜೂ.22]: ಬೆಂಗಳೂರಿನ ಶಿವಾಜಿನಗರ ಶಾಸಕ ರೊಷನ್ ಬೇಗ ವಿರುದ್ದ ಕ್ರಮ ಜರುಗಿಸಿದ್ದಕ್ಕೆ ಇನ್ನುಳಿದ ಅಸಮಾಧಾನಿತ ಕಾಂಗ್ರೆಸ್ ನಾಯಕರು ಪುಲ್ ಸೈಲೆಂಟ್ ಆಗಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದ ಹಿರಿಯ ಶಾಸಕ ರಾಮಲಿಂಗರೆಡ್ಡಿ ಈಗ ಸುಮ್ಮನಾಗಿದ್ದಾರೆ.
ಕಾಂಗ್ರೆಸ್ ನಿಂದ ಶಿವಾಜಿನಗರ ಶಾಸಕ ರೋಶನ್ ಬೇಗ್ ಸಸ್ಪೆಂಡ್
ಇಂದು [ಶನಿವಾರ] ಬೆಳಗಾವಿಯ ರಾಮದುರ್ಗದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಲು ಹಿಂದೇಟು ಹಾಕಿದರು. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಪ್ರತಿಕ್ರಿಯೆ ನೀಡುಲು ಹಿಂದೇಟು ಹಾಕಿದ ರೆಡ್ಡಿ, ನಾನು ಹಿಂದೆ ಮಾತನಾಡಿದ್ದೆನೆ, ಹೀಗೇನೂ ಮಾತಾಡಲ್ಲ. ಸಂಪುಟ ವಿಸ್ತರಣೆಯ ಬಗ್ಗೆ ಪದೇ-ಪದೇ ಮಾತನಾಡಲ್ಲ ಎಂದು ಹೇಳಿ ಜಾರಿಕೊಂಡರು.
ಇನ್ನು ದೆವೆಗೌಡರ ಹೆಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರಕಾರ ಬೀಳಲ್ಲ, ಸಣ್ಣಪುಟ್ಟ ಅಸಮಾದಾನಗಳು ಇರುತ್ತೆ. ಸಮ್ಮಿಶ್ರ ಸರಕಾರ ಅಂದಾಗ ಎಲ್ಲವೂ ಸರಿ ಇರಲ್ಲ. ಹೊಂದಾಣಿಕೆ ಮಾಡಿಕ್ಕೊಂಡು ಹೋಗಬೇಕು ಎಂದರು.
ಒಟ್ಟಿನಲ್ಲಿ ಮೊದಲು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದ ರಾಮಲಿಂಗರೆಡ್ಡಿ, ಇಂದು ಯಾವುದೇ ಕಾರಣಕ್ಕೂ ಯಾವೊಬ್ಬ ನಾಯಕರ ಬಗ್ಗೆ ಮಾತನಾಡಲಿಲ್ಲ.
ಬೇಗ್ ಗೆ ಕೊಟ್ಟ ಶಿಕ್ಷೆಯಿಂದಾಗಿ ಮೊದಲಿನಂತೆ ಅತೃಪ್ತ ಕಾಂಗ್ರೆಸ್ ನಾಯಕರು ಬಾಯಿಬಿಡುತ್ತಿಲ್ಲ. ರೋಷನ್ ಬೇಗ್ ಗೆ ಬಂದ ಗತಿ ನಮಗೂ ಬರಬಹುದು ಎಂದು ಥಂಡ ಹೊಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.