
ಬೆಂಗಳೂರು[ಅ. 10] ವಿಧಾನಸಭೆ ವಿಪಕ್ಷ ನಾಯಕರಾಗಿ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು ಕುತೂಹಲ ಕೆರಳಿಸಿದ್ದ ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಪರಿಷತ್ ವಿಪಕ್ಷ ನಾಯಕರಾಗಿ ಎಸ್.ಆರ್ .ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.
’ಅಧಿಕಾರವಿಲ್ಲದೇ ಸಿದ್ದು, HDK ಹುಚ್ಚರಾಗ್ತಿದ್ದಾರೆ’
ವಿಧಾನ ಸಭೆ ಅಧಿವೇಶನ ಮುಂದುವರಿಸುವ ಬಗ್ಗೆ ಬೇಡಿಕೆ ಇಡಲು ತೀರ್ಮಾನ ಸಹ ತೆಗೆದುಕೊಳ್ಳಲಾಗಿದೆ. ಕನಿಷ್ಠ 15 ದಿನ ಅಧಿವೇಶನ ನಡೆಸುವಂತೆ ಒತ್ತಾಯಿಸಲು ಸಿಎಲ್.ಪಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಉತ್ತರ ಕರ್ನಾಟಕ ನೆರೆ ಮತ್ತು ಬರ ವಿಚಾರವಾಗಿ ಸದನದಲ್ಲಿ ಎಲ್ಲ ಶಾಸಕರು ಸರ್ಕಾರದ ವಿರುದ್ಧ ಮಾತನಾಡಬೇಕು. ಪ್ರವಾಹ ವಿಚಾರವಾಗಿ ಸದನದಲ್ಲಿ ಧರಣಿ ನಡೆಸುವ ವಿಚಾದ ಬಗ್ಗೆಯೂ ನಿರ್ಧರಿಸೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.