
ನವದೆಹಲಿ[ನ.01] ಸದಾ ಒಂದಿಲ್ಲೊಂದು ವಿವಾದಾತ್ಮಕ ಟ್ವೀಟ್ ಮಾಡಿಯೇ ಸುದ್ದಿ ಮಾಡುವ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಈ ಬಾರಿ ಅಂಥದ್ದೇ ಕೆಲಸ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ಯನು ಹಕ್ಕಿಯ ಹಿಕ್ಕೆಗೆ ಹೋಲಿಸಿ ಬರೆದ ರೀತಿಯ ಟ್ವೀಟ್ ಸದ್ದು ಮಾಡಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಅನಾವರಣಗೊಳಿಸುವ ವೇಳೆ ಕ್ಲಿಕ್ಕಿಸಿರುವ ಫೋಟೋವೊಂದನ್ನು ಪೋಸ್ಟ್ ಮಾಡಿರುವ ರಮ್ಯಾ ಸಾಲೊಂದನ್ನು ಬರೆದಿದ್ದಾರೆ.
ಫೋಟೋದಲ್ಲಿ ಮೋದಿ ಪಟೇಲರ ಪ್ರತಿಮೆಯ ಕಾಲಿನ ಬಳಿ ನಿಂತಿದ್ದಾರೆ. ರಮ್ಯಾ ಅವರ ಟ್ವೀಟ್ಗೆ ತರೇವಾರಿ ಪ್ರತಿಕ್ರಿಯೆ ಬಂದಿದ್ದು ರಾಹುಲ್ ಮತ್ತು ರಮ್ಯಾರನ್ನು ಜಾಲತಾಣಿಗರು ವಿವಿಧ ಫೋಟೋ ಬಳಸಿ ಝಾಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.