ಗೋವಾ ಸರ್ಕಾರ ರಚನೆಗೆ ’ಕೈ’ ಹಕ್ಕು ಮಂಡನೆ, #VampireCongress ಟ್ರೆಂಡ್

Published : Mar 18, 2019, 11:15 AM ISTUpdated : Mar 20, 2019, 11:11 AM IST
ಗೋವಾ ಸರ್ಕಾರ ರಚನೆಗೆ ’ಕೈ’ ಹಕ್ಕು ಮಂಡನೆ,  #VampireCongress ಟ್ರೆಂಡ್

ಸಾರಾಂಶ

ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನದಿಂದ, ಗೋವಾ ಸರಕಾರ ರಚಿಸಲು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ರಾಜ್ಯಪಾಲರಿಗೆ ಹಕ್ಕು ಮಂಡನಾ ಪತ್ರ ಸಲ್ಲಿಸಿದೆ. ಇನ್ನೂ ಸಿಎಂ ಅಂತ್ಯ ಸಂಸ್ಕಾರ ಆಗೋ ಮುನ್ನವೇ ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಣಜಿ[ಮಾ.18]: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ನಿಧನ ಹೊಂದುತ್ತಿದ್ದಂತೆಯೇ, ರಾಜಕೀಯ ಅಸ್ಥಿರತೆ ತಲೆದೋರುವ ಸಾಧ್ಯತೆ ಇದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಹಾಗೂ ಮಿತ್ರ ಪಕ್ಷದಲ್ಲಿ ಗೊಂದಲವಿದೆ. ಆದರೆ, ಪರ್ರಿಕರ್ ಅವರ ಅಂತ್ಯ ಸಂಸ್ಕಾರ ಆಗುವ ಮುನ್ನವೇ, ರಾಜ್ಯದಲ್ಲಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಸರಕಾರ ರಚಿಸಲು ಹಕ್ಕು ಮಂಡನೆ ಪತ್ರ ಸಲ್ಲಿಸಿದ್ದು, ಅತೀವ ಟೀಕೆಗೆ ಗುರಿಯಾಗಿದೆ.

'ಕಾಂಗ್ರೆಸ್‌ಗೆ ಅಧಿಕಾರದ ವ್ಯಾಮೋಹ. ಗೋವಾ ಮುಖ್ಯಮಂತ್ರಿ ಅಂತ್ಯ ಸಂಸ್ಕಾರ ಆಗುವವರೆಗೆ ಕಾಯುವಷ್ಟು ವ್ಯವಧಾನವೂ ಗ್ರೆಸ್‌ಗಿಲ್ಲವೇ?..' ಎಂದು ಹಲವರು ಪ್ರಶ್ನಿಸಿದ್ದು, #VampireCongress ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿದೆ. 

ಕೇವಲ 40 ಸದಸ್ಯರ ಬಲಾಬಲ ಹೊಂದಿರುವ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ 14 ಸ್ಥಾನಗಳಿದ್ದು, ಕಳೆದ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿಗೆ 11, ಗೋವಾ ಫಾರ್ವರ್ಡ್ ಹಾಗೂ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ (ಎಂಜಿಪಿ), ಸ್ವತಂತ್ರ ಅಭ್ಯರ್ಥಿಗಳು 3, ಎನ್‌ಸಿಪಿ ಹಾಗೂ ಸ್ಪೀಕರ್‌ ಸೇರಿ ತಲಾ ಒಬ್ಬ ಸದಸ್ಯರಿದ್ದಾರೆ. 

ಸದಸ್ಯ ಬಲದ ಲೆಕ್ಕದೊಂದಿಗೆ ರಾಜ್ಯಪಾಲರಿಗೆ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಹಕ್ಕು ಪತ್ರ ನೀಡಿದ್ದು, ‘ಮನೋಹರ್‌ ಪರ್ರಿಕರ್‌’ ಎಂಬ ‘ಫ್ಯಾಕ್ಟರ್‌’ಮೇಲೆ ಸರಕಾರ ನಿಂತಿದ್ದು, ಇದೀಗ ಮುಖ್ಯಮಂತ್ರಿ ನಿಧನದಿಂದ ಅದು ಬಲ ಕಳೆದುಕೊಂಡಿದೆ. ಕಾಂಗ್ರೆಸ್‌ಗೆ ಸರಕಾರ ರಚಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. 

ಪರ್ರಿಕರ್ ಫ್ಯಾಕ್ಟರ್ ಮೇಲೆ ನಿಂತ ಸರಕಾರ:

ಇಲ್ಲೀಯವರೆಗೆ ಗೋವಾದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಕೇವಲ ‘ಮನೋಹರ್‌ ಪರ್ರಿಕರ್‌’ ಎಂಬ ‘ಫ್ಯಾಕ್ಟರ್‌’ ಮೇಲೆ ನಿಂತಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಎದುರಾದಾಗ, ಕೇಂದ್ರ ಸಚಿವರಾಗಿದ್ದ ಪರ್ರಿಕರ್‌, ಅನಿವಾರ್ಯವಾಗಿ ಗೋವಾಗೆ ಮರಳಿ ಮುಖ್ಯಮಂತ್ರಿಯಾಗಿದ್ದರು. ಪ್ರಮುಖ ಮಿತ್ರಪಕ್ಷ ಗೋವಾ ಫಾರ್ವರ್ಡ್‌ ಪಕ್ಷವು, ‘ಕೇವಲ ಮನೋಹರ್‌ ಪರ್ರಿಕರ್‌ ಅವರು ಮುಖ್ಯಮಂತ್ರಿ ಆಗಿರುವರೆಗೆ ನಮ್ಮ ಬೆಂಬಲ ಸರ್ಕಾರಕ್ಕೆ ಇರುತ್ತದೆ. ಆಮೇಲಿನದು ಹೇಳಲು ಆಗುವುದಿಲ್ಲ’ ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮೂವರು ಶಾಸಕರನ್ನು ಹೊಂದಿರುವ ಗೋವಾ ಫಾರ್ವರ್ಡ್‌ ಪಕ್ಷ ಬೆಂಬಲ ಹಿಂಪಡೆದರೆ ಗತಿಯೇನು ಎಂಬ ಪ್ರಶ್ನೆ ಎದುರಾಗಿದೆ.

ಗೋವಾ ಸರ್ಕಾರ ಉಳಿಯುತ್ತಾ : ಉರುಳುತ್ತಾ..?

ಇದೇ ವೇಳೆ ಸರ್ಕಾರದ ಜತೆ ಅಷ್ಟೇನೂ ಸುಮಧುರ ಸಂಬಂಧ ಹೊಂದಿರದ ಇನ್ನೊಂದು ಮಿತ್ರಪಕ್ಷವಾದ ಎಂಜಿಪಿಯೂ ‘ಪರ್ರಿಕರ್‌’ ಎಂಬ ಕೊಂಡಿಯನ್ನು ಆಧರಿಸಿ ಸರ್ಕಾರದ ಜತೆಗೆ ನಿಂತುಕೊಂಡಿತ್ತು. ಪರ್ರಿಕರ್‌ ಎಂಬ ಆಯಸ್ಕಾಂತೀಯ ವ್ಯಕ್ತಿತ್ವವು ಉತ್ತರ ಧ್ರುವ-ದಕ್ಷಿಣ ಧ್ರುವದಂತಿದ್ದ ಪಕ್ಷಗಳನ್ನು ಸರ್ಕಾರದಲ್ಲಿ ಹಿಡಿದಿಟ್ಟುಕೊಂಡಿತ್ತು. ಆದರೆ ಪರ್ರಿಕರ್‌ ಇಲ್ಲದ ಈ ಸಂದರ್ಭದಲ್ಲಿ ಸರ್ಕಾರವನ್ನು ಮುನ್ನಡೆಸುವ ಪರ್ರಿಕರ್‌ ಅವರಂಥ ಸಮರ್ಥ ನಾಯಕರ ಕೊರತೆ ರಾಜ್ಯ ಬಿಜೆಪಿಯಲ್ಲಿ ಎದ್ದು ಕಾಣುತ್ತಿದೆ. 

ಗೋವಾ ಮುಂದಿನ ಸಿಎಂ ಯಾರು ?

ಹೀಗಾಗಿ ಸರ್ಕಾರ ಉಳಿಯುತ್ತಾ? ಉರುಳುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ಈಗಾಗಲೇ ಒಬ್ಬ ಶಾಸಕ ನಿಧನ ಹೊಂದಿದ ಕಾರಣ ಗೋವಾ ಸರ್ಕಾರ ಅಲ್ಪಮತಕ್ಕೆ ಇಳಿದಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಪಕ್ಷ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದೆ. ಈಗ ಪರ್ರಿಕರ್‌ ಅವರ ನಿಧನದ ಕಾರಣ ಕಾಂಗ್ರೆಸ್‌ ವಾದಕ್ಕೆ ಮತ್ತಷ್ಟು ಪ್ರಬಲ ಕಾರಣ ಸಿಗುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ