ದೇಶ ಹುತಾತ್ಮರನ್ನು ಸ್ಮರಿಸುತ್ತಿದ್ದರೆ ಮೋದಿ ಶೂಟಿಂಗ್‌ನಲ್ಲಿ ಬ್ಯುಸಿ: ಕಾಂಗ್ರೆಸ್!

By Web DeskFirst Published Feb 21, 2019, 2:14 PM IST
Highlights

ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆ| ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್| ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ವಕ್ತಾರ| ‘ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಚಾರ ಶೂಟಿಂಗ್‌ನಲ್ಲಿ ಮೋದಿ ಬ್ಯುಸಿ’| ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸಿದ ರಣ್‌ದೀಪ್ ಸುರ್ಜೆವಾಲಾ|

ನವದೆಹಲಿ(ಫೆ.21): ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ಪಕ್ಷ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಆದರೆ ಕಾಂಗ್ರೆಸ್ ನಾಯಕರು ಮಾತ್ರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡುವುದನ್ನು ಮುಂದುವರೆಸಿದ್ದಾರೆ. ಇಡೀ ದೇಶವೇ ಭಯೋತ್ಪಾದನೆ ದಾಳಿಗೆ ತತ್ತರಿಸಿ ಹೋಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಮಾತ್ರ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಸರ್ಕಾರದ ಪ್ರಚಾರ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

Randeep Surjewala, Congress: When the whole country was mourning the loss of lives of our jawans in in the afternoon, PM Narendra Modi was busy shooting for a film in Jim Corbett park till evening. Is there any PM in the world like this? I have no words really. pic.twitter.com/P5mgnU3drA

— ANI (@ANI)

ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ, ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಲ್ಲದೇ ನಿನ್ನೆ ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಜೊತೆ ಮಾತುಕತೆ ನಡೆಸಿದ ನಂತರ, ಪ್ರಧಾನಿ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಯನ್ನು ಬೆಳೆಸಿದ ಪಾಕಿಸ್ತಾನದ ಹೆಸರನ್ನು ಬರೆಯುವುದನ್ನೇ ಮರೆತಿದ್ದಾರೆ ಎಂದು ಸುರ್ಜೆವಾಲಾ ಆರೋಪಿಸಿದರು.

RS Surjewala.Congress: How did terrorists acquire a huge amount of RDX and rocket launchers? 48 hours before the attack JeM released a video warning of attack. There was an intelligence report also on 8th February. Why were these warnings ignored? pic.twitter.com/wVzaZrdh7k

— ANI (@ANI)

ಪುಲ್ವಾಮಾ ದಾಳಿ ದೇಶದ ಐಕ್ಯತೆ, ಸಮಗ್ರತೆ ಮೇಲೆ ಬಿದ್ದ ಪೆಟ್ಟಾಗಿದ್ದು,  ದೇಶದ ಭದ್ರತೆ ಕಾಪಾಡುವಲ್ಲಿ ವಿಫಲರಾದ ಪ್ರಧಾನಿ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ದೇಶದಲ್ಲಿ ಆಕ್ರೋಶ ಭುಗಿಲೆದ್ದಿರುವಾಗ ನಗುತ್ತಾ  ಪಾರ್ಕ್‌ನಲ್ಲಿ ಕಾಲಹರಣ ಮಾಡುವ ಪ್ರಧಾನಿ ಅವರನ್ನು ಎಲ್ಲಾದರೂ ಕಂಡಿದ್ದೀರಾ ಎಂದು ಸುರ್ಜೆವಾಲಾ ಕಿಡಿಕಾರಿದರು.

click me!