
ನವದೆಹಲಿ (ಡಿ.31): ನೋಟು ಅಮಾನ್ಯ ಕ್ರಮವನ್ನು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವೆಂದು ಬಣ್ಣಿಸಿರುವ ಕಾಂಗ್ರೆಸ್ ಪಕ್ಷವು, ಅದರ ವಿರುದ್ಧ ದೇಶಾದಾದ್ಯಂತ ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ಹೇಳಿದೆ.
ನೋಟು ಅಮಾನ್ಯ ಕ್ರಮವು ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣವಾಗಿದೆ, ಕಾಂಗ್ರೆಸ್ ಅದರ ವಿರುದ್ಧ ದೇಶವ್ಯಾಪಿ ಚಳುವಳಿ ನಡೆಸಲಿದೆ, ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ನೋಟು ಅಮಾನ್ಯ ಕ್ರಮದಿಂದ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ, ರೈತರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಹಾಗೂ ಜನಸಾಮಾನ್ಯರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಆದರೆ ಪ್ರಯೋಜನವಾಗಿರುವುದು ಕೇವಲ ಪ್ರಧಾನಿ ಮೋದಿಯವರ 50 ಮಂದಿ ಆಪ್ತ ಸ್ನೇಹಿತರಿಗೆ ಮಾತ್ರವೆಂದು ಸುರ್ಜೆವಾಲಾ ಹೇಳಿದ್ದಾರೆ.
ಭರವಸೆಗಳನ್ನು ನೀಡಿ ಅದನ್ನು ಮುರಿಯುವುದು ಪ್ರಧಾನಿ ಮೋದಿಯವರಿಗೆ ಅಭ್ಯಾಸವಾಗಿ ಬಿಟ್ಟಿದೆಯೆಂದು ಅವರು ಹೇಳಿದ್ದಾರೆ.
ನೋಟು ಅಮಾನ್ಯ ಕ್ರಮದ ವಿರುದ್ಧ ಜನವರಿ ತಿಂಗಳಿನಲ್ಲಿ 3 ಹಂತಗಳಲ್ಲಿ ಅಭಿಯಾನ ನಡೆಯಲಿರುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.