
ನವದೆಹಲಿ(ಅ.11): ಕಾಶ್ಮೀರ ವಿಚಾರ ತಮ್ಮ ಗಮನದಲ್ಲಿದೆ ಎಂದು ಹೋದಲ್ಲಿ ಬಂದಲ್ಲಿ ಹೇಳುತ್ತಿರುವ ಚೀನಾಗೆ ಸೂಕ್ತ ಪ್ರತಿಕ್ರಿಯೆ ನೀಡುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.
ಕಾಶ್ಮೀರ ಕುರಿತು ಸೊಲ್ಲೆತ್ತುವ ಚೀನಾ ಅಧ್ಯಕ್ಷ ಕ್ಸಿ ಜಿನ್'ಪಿಂಗ್ ಅವರಿಗೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾಲ್ತೆಗೆಯುವಂತೆ ನಮ್ಮ 56 ಇಂಚಿನ ಪ್ರಧಾನಿ ಮೋದಿ ಹೇಳಿಲ್ಲವೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪಿಒಕೆಯಲ್ಲಿ ಚೀನಾ 5 ಸಾವಿರ ಎಕರೆ ಭೂಮಿ ಖರೀದಿಸಿದ್ದು, ಇದನ್ನು ಪ್ರಶ್ನಿಸದ ಮೋದಿ ಭಾರತದ ಶಕ್ತಿಯನ್ನು ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹರಿಹಾಯ್ದಿದ್ದಾರೆ.
ಚೀನಾ ಕಾಶ್ಮೀರ ವಿಚಾರ ಕೇಳಿದರೆ, ಹಾಂಕಾಂಗ್'ನಲ್ಲಿ ಅದು ನಡೆಸುತ್ತಿರುವ ದೌರ್ಜನ್ಯ, ಟಿಬೆಟ್ನಲ್ಲಿನ ಸ್ವಾತಂತ್ರ್ಯ ಹರಣ, ದಕ್ಷಿಣ ಚೀನಾ ಸಮುದ್ರದಲ್ಲಿ ಅದರ ಅಟ್ಟಹಾಸಗಳ ಕುರಿತು ಮೋದಿ ಪ್ರಶ್ನಿಸಬೇಕಲ್ಲವೇ ಎಂದು ಕಾಂಗ್ರೆಸ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.