
ನವದೆಹಲಿ(ಜು.10): ಲೋಕಸಭೆಯಲ್ಲಿ ಇಂದು ಮತ್ತೆ ಕರ್ನಾಟಕದ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್, ಕರ್ನಾಟಕದ ಬೆಳವಣಿಗೆಯ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಸತತವಾಗಿ ಗದ್ದಲ ನಡೆಸಿತು.
ಕಾಂಗ್ರೆಸ್ ತೀವ್ರ ಪ್ರತಿಭಟನೆ ಪರಿಣಾಮ ಕೊನೆಗೂ ಅಧೀರ್ ರಂಜನ್ ಚೌಧರಿ ಅವರಿಗೆ ಮಾತಾನಾಡಲು ಅವಕಾಶ ಸ್ಪೀಕರ್ ಅವಕಾಶ ನೀಡಿದರು.
ಈ ವೇಳೆ ಮಾತನಾಡಿದ ಚೌಧರಿ, ಮಹಾರಾಷ್ಟ್ರದಲ್ಲಿ ಮಾರ್ಷಲ್ ಆಡಳಿತ ಜಾರಿಯಲ್ಲಿದ್ದು, ಕರ್ನಾಟಕದ ಸಚಿವ ಡಿಕೆ ಶಿವಕುಮಾರ್ ಬುಕ್ ಮಾಡಿದ್ದ ರೂಂನ್ನು ಕ್ಯಾನ್ಸಲ್ ಮಾಡಿಸಲಾಗಿದೆ ಎಂದು ದೂರಿದರು.
ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಷಡ್ಯಂತ್ರ ನಡೆಯುತ್ತಿದ್ದು, ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಆರೋಪಿಸಿದರು.
ಇನ್ನು ಚೌಧರಿ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿಯ ಪ್ರಹ್ಲಾದ ಜೋಷಿ, ಮುಂಬೈ ಪೊಲೀಸರಿಗೆ ಡಿಕೆಶಿ ಅವರಿಂದ ರಕ್ಷಣೆ ಕೋರಿ 10 ಶಾಸಕರು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದ್ದಲ್ಲದೇ ಸಭಾತ್ಯಾಗ ನಡೆಸಿದರು. ತೀವ್ರ ಗದ್ದಲದ ಪರಿಣಾಮ ಸ್ಪೀಕರ್ ಸದನವನ್ನು ಮುಂದೂಡಿದ ಪ್ರಸಂಗವೂ ನಡೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.