ಕಾಶ್ಮೀರದಲ್ಲಿ ಯಾವುದೇ ದುಸ್ಸಾಹಸ ಬೇಡ: ಕಾಂಗ್ರೆಸ್ ಎಚ್ಚರಿಕೆ!

Published : Aug 04, 2019, 03:34 PM IST
ಕಾಶ್ಮೀರದಲ್ಲಿ ಯಾವುದೇ ದುಸ್ಸಾಹಸ ಬೇಡ: ಕಾಂಗ್ರೆಸ್ ಎಚ್ಚರಿಕೆ!

ಸಾರಾಂಶ

ಕಣಿವೆ ರಾಜ್ಯದಲ್ಲಿ ದುಸ್ಸಾಹಸಕ್ಕೆ ಕೈ ಹಾಕದಂತೆ ಕಾಂಗ್ರೆಸ್ ಎಚ್ಚರಿಕೆ| ಕಣಿವೆ ರಾಜ್ಯಕ್ಕೆ ಹೆಚ್ಚುವರಿ ಸೇನೆ ರವಾನೆಗೆ ಕಾಂಗ್ರೆಸ್ ವಿರೋಧ| ಕೇಂದ್ರ ಸರ್ಕಾರದ ನಡೆಯಿಂದ ಗಂಭೀರ ಪರಿಣಾಮ ಎದುರಾಗುವ ಆತಂಕ ಎಂದ ಕಾಂಗ್ರೆಸ್| ‘ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಯಾರಿಗೂ ತಿಳಿದಿಲ್ಲ’|

ನವದೆಹಲಿ(ಆ.03): ಕಣಿವೆ ರಾಜ್ಯಕ್ಕೆ ಹೆಚ್ಚುವರಿ ಸೇನೆ ರವಾನೆ ಹಾಗೂ 35ಎ ಕಲಂ, 370ನೇ ವಿಧಿ ರದ್ದತಿ ಕುರಿತು ಹರಡಿರುವ ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕಣಿವೆಯಲ್ಲಿ ರಾಜ್ಯದಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ನವದೆಹಲಿಯಲ್ಲಿ ಪತ್ರಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೈ ನಾಯಕರು, ಸದ್ಯದ ಪರಿಸ್ಥಿತಿಯಲ್ಲಿ ಕಣಿವೆ ರಾಜ್ಯದಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಿದರೂ ಅದು ಗಂಭೀರ ಪರಿಣಾಮ ಬೀರಲಿದೆ ಎಂದು ಮೋದಿ ಸರ್ಕಾರವನ್ನು ಎಚ್ಚರಿಸಿದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಕೇಂದ್ರ ಸರ್ಕಾರ ಏನು ಮಾಡಲಿದೆ ಎಂಬುದು ಯಾರಿಗೂ ತಿಳಿದಿಲ್ಲ  ಎಂದು ಅಸಮಾಧಾನ ಹೊರಹಾಕಿದರು. ಸರ್ಕಾರ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ಉಂಟಾಗಬಹುದಾದ ಘೋರ ಪರಿಣಾಮಗಳ ಕುರಿತು ಕಾಂಗ್ರೆಸ್ ಚಿಂತಿವಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು