ಬಿಜೆಪಿ ಭಿನ್ನಮತದಿಂದ ‘ಕೈ’ಗೆ ಲಾಭ : ಸಚಿವ ರಾಯರೆಡ್ಡಿ

Published : Jan 26, 2017, 02:46 PM ISTUpdated : Apr 11, 2018, 01:00 PM IST
ಬಿಜೆಪಿ ಭಿನ್ನಮತದಿಂದ ‘ಕೈ’ಗೆ ಲಾಭ : ಸಚಿವ ರಾಯರೆಡ್ಡಿ

ಸಾರಾಂಶ

ಕೊಪ್ಪಳದಲ್ಲಿ ಮಾತನಾಡಿದ ರಾಯರೆಡ್ಡಿ ಈಗಾಗಲೇ ಕಾಂಗ್ರೆಸ್​ ಪಕ್ಷ ಮಾಡಿರುವ ಅಭಿವೃದ್ಧಿಯಿಂದ ನಮಗೆ ಲಾಭವಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯವೂ ಲಾಭವಾಗಲಿದೆ ಎಂದರು.

ಕೊಪ್ಪಳ (ಜ.26): ರಾಯಣ್ಣ ಬ್ರಿಗೇಡ್​ ಸ್ಥಾಪನೆ ವಿಚಾರದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕಾಂಗ್ರೆಸ್’​ಗೆ ಲಾಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು ಈಗಾಗಲೇ ಕಾಂಗ್ರೆಸ್​ ಪಕ್ಷ ಮಾಡಿರುವ ಅಭಿವೃದ್ಧಿಯಿಂದ ನಮಗೆ ಲಾಭವಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯವೂ ಲಾಭವಾಗಲಿದೆ ಎಂದರು.

ನ್ಯಾಯಮೂರ್ತಿ ವಿಶ್ವನಾಥ್​​ ಶೆಟ್ಟಿಯವರನ್ನು ಲೋಕಾಯುಕ್ತ ಹುದ್ದಗೆ ನೇಮಕ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಬಸವರಾಜ ರಾಯರೆಡ್ಡಿ, ಆರೋಪಗಳು ಇದ್ದಾಕ್ಷಣ ಭ್ರಷ್ಟರು ಎನ್ನುಲು ಸಾಧ್ಯವಿಲ್ಲ. ಅವರ ಮೇಲಿನ ಆರೋಪಗಳು ಸಾಬಿತಾಗಬೇಕು, ಆದರೆ ಅವರ ಮೇಲಿನ ಯಾವುದೇ ಆರೋಪಗಳು ಸಾಬಿತಾಗಿಲ್ಲ, ಹೀಗಾಗಿ ನ್ಯಾಯಮೂರ್ತಿ ವಿಶ್ವನಾಥ್​ ಶೆಟ್ಟಿಯವರನ್ನು ಭ್ರಷ್ಟರು ಎನ್ನಲು ಸಾಧ್ಯವಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ