
ನವದೆಹಲಿ: ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಪಟ್ಟು ಹಿಡಿದಿರುವ ರಾಹುಲ್ ಗಾಂಧಿ ಅವರನ್ನು ಮನವೊಲಿಸುವ ಸಲುವಾಗಿ ಪಕ್ಷದಲ್ಲಿ ಕಾರ್ಯಾಧ್ಯಕ್ಷ ಹುದ್ದೆಯೊಂದನ್ನು ಸೃಷ್ಟಿಸಬೇಕು ಎಂದು ಕೆಲ ಹಿರಿಯ ನಾಯಕರು ಪ್ರಸ್ತಾಪ ಇಟ್ಟಿದ್ದಾರೆ.
ನೆಹರು- ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಬೇಕು. ಕಾಂಗ್ರೆಸ್ ಅಧ್ಯಕ್ಷರಿಗೆ ಇವರು ಸಹಾಯ ಮಾಡಬೇಕು. ಅಧ್ಯಕ್ಷರ ದೈನಂದಿನ ಕೆಲಸಗಳನ್ನು ನೋಡಿಕೊಳ್ಳುವ ಮೂಲಕ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಪಕ್ಷ ಸಂಘಟಿಸಲು ಅಧ್ಯಕ್ಷರಿಗೆ ಅನುವು ಮಾಡಿಕೊಡಬೇಕು ಎಂಬುದು ಈ ಪ್ರಸ್ತಾವದ ತಿರುಳು ಎಂದು ವರದಿಗಳು ತಿಳಿಸಿವೆ. ಆದರೆ ಇದಕ್ಕೆ ರಾಹುಲ್ ಒಪ್ಪುತ್ತಾರಾ ಎಂಬುದು ತಿಳಿದುಬಂದಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕೆ ಹೀನಾಯ ಪ್ರದರ್ಶನ ನೀಡಿತು ಎಂಬ ಕಾರಣ ಪತ್ತೆಗೆ ಹಾಗೂ ಪ್ರಯೋಜನಾಕಾರಿ ಕ್ರಿಯಾಯೋಜನೆಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸಬೇಕು. ಈ ಹಿಂದಿನ ರೀತಿ ವರದಿಯನ್ನು ರಹಸ್ಯವಾಗಿಡದೇ ಕಾಂಗ್ರೆಸ್ಸಿನ ಸಂಪೂರ್ಣ ಸಿಡಬ್ಲ್ಯುಸಿ (ಕಾಂಗ್ರೆಸ್ ಕಾರ್ಯಕಾರಿ) ಸಭೆಯ ಮುಂದೆ ಇಟ್ಟು ಚರ್ಚೆ ನಡೆಸಬೇಕು ಎಂದು ರಾಹುಲ್ ಅವರನ್ನು ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.