ಸಿಎಂ ಸಿದ್ದರಾಮಯ್ಯ ನಾನು ಒಂದೇ ಗಾಡಿಯ ನೊಗ ಹೊತ್ತ ಎತ್ತುಗಳು : ಪರಮೇಶ್ವರ್

Published : Dec 18, 2017, 11:13 AM ISTUpdated : Apr 11, 2018, 12:43 PM IST
ಸಿಎಂ ಸಿದ್ದರಾಮಯ್ಯ ನಾನು ಒಂದೇ ಗಾಡಿಯ ನೊಗ ಹೊತ್ತ ಎತ್ತುಗಳು : ಪರಮೇಶ್ವರ್

ಸಾರಾಂಶ

ನಾನು - ಸಿಎಂ ಸಿದ್ದರಾಮಯ್ಯ ಒಂದೇ ಗಾಡಿಯ ನೊಗ ಹೊತ್ತ ಜೋಡಿ ಎತ್ತು ಇದ್ದಂತೆ. ನಾವು ನೊಗ ಹೊತ್ತು ರಾಜ್ಯಾದ್ಯಂತ ಓಡಾಡಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬಣ್ಣಿಸಿದ್ದಾರೆ.

ಮಧುಗಿರಿ (ಡಿ.18): `ನಾನು- ಸಿಎಂ ಸಿದ್ದರಾಮಯ್ಯ ಒಂದೇ ಗಾಡಿಯ ನೊಗ ಹೊತ್ತ ಜೋಡಿ ಎತ್ತು ಇದ್ದಂತೆ. ನಾವು ನೊಗ ಹೊತ್ತು ರಾಜ್ಯಾದ್ಯಂತ ಓಡಾಡಿದ್ದೇವೆ. ನಾವಿಬ್ಬರೂ ಅಣ್ಣ ತಮ್ಮಂದಿರಂತೆ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬಣ್ಣಿಸಿದ್ದಾರೆ.

ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಡಿದ್ದ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾನುವಾರ ಮಧುಗಿರಿ ತಾಲೂಕು ಪುರವರ ಹೋಬಳಿ ಬ್ಯಾಲ್ಯದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. `ಪರಮೇಶ್ವರ್’ಗೂ ಸಿದ್ದರಾಮಯ್ಯಗೂ ಆಗುವುದಿಲ್ಲ ಎಂದು ಯಡಿಯೂರಪ್ಪ ಹೇಳುತ್ತಾರೆ.

ಇದು ಶುದ್ಧ ಸುಳ್ಳು. ಸಿಎಂ ಸಿದ್ದರಾಮಯ್ಯ ಮತ್ತು ನಾನು ಒಗ್ಗೂಡಿ ಈ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ' ಎಂದ ಅವರು, ಯಡಿಯೂರಪ್ಪ- ಈಶ್ವರಪ್ಪ ಬಿಜೆಪಿಯಲ್ಲಿ ಎಂದಿಗೂ ಒಂದಾಗುವುದಿಲ್ಲ.

ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಸಲುವಾಗಿ ಯಾತ್ರೆ ಕೈಗೊಂಡಿದ್ದೇವೆ. ಇಲ್ಲ ಸಲ್ಲದ ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದು. ವಿರೋಧ ಪಕ್ಷಗಳು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ. ನಾವೆಲ್ಲ ಒಟ್ಟಾಗಿದ್ದೇವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!