ಚುನಾವಣೆ ವಿಚಾರವಾಗಿ ಕಾಂಗ್ರೆಸ್’ಗೆ ಕಾಡುತ್ತಿದೆ ಚಿಂತೆ..!

Published : Mar 02, 2018, 11:07 AM ISTUpdated : Apr 11, 2018, 12:44 PM IST
ಚುನಾವಣೆ ವಿಚಾರವಾಗಿ ಕಾಂಗ್ರೆಸ್’ಗೆ ಕಾಡುತ್ತಿದೆ ಚಿಂತೆ..!

ಸಾರಾಂಶ

ಕಾಂಗ್ರೆಸ್ಸಿನ ರಹೀಂಖಾನ್ ಹಾಲಿ ಶಾಸಕ. ಅವರು ಮತ್ತೊಮ್ಮೆ ಸ್ಪರ್ಧಿಸುವುದು ಬಹುತೇಕ ಖಚಿತ. ಮಾಜಿ ಸಚಿವ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿ ಅಭ್ಯರ್ಥಿ ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಹಿಂದೆಯೇ ನೀಡಿದ್ದಾರೆ.

ಬೀದರ್ : ಕಾಂಗ್ರೆಸ್ಸಿನ ರಹೀಂಖಾನ್ ಹಾಲಿ ಶಾಸಕ. ಅವರು ಮತ್ತೊಮ್ಮೆ ಸ್ಪರ್ಧಿಸುವುದು ಬಹುತೇಕ ಖಚಿತ. ಮಾಜಿ ಸಚಿವ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿ ಅಭ್ಯರ್ಥಿ ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಹಿಂದೆಯೇ ನೀಡಿದ್ದಾರೆ.

ಹೀಗಾಗಿ ಸೂರ್ಯಕಾಂತ ಬಿರುಸಿನ ಓಡಾಟದಲ್ಲಿ ತೊಡಗಿದ್ದಾರೆ. ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಿಲ್ಲದ ಕಾರಣ, ಗುರುನಾಥ ಕೊಳ್ಳೂರ ಅಭ್ಯರ್ಥಿಯಾಗಲು ಪ್ರಯತ್ನಿಸುತ್ತಿದ್ದಾರೆ. ಆರ್‌ಎಸ್‌ಎಸ್ ಜತೆ ಒಡನಾಟ ಹೊಂದಿರುವ ಈಶ್ವರಸಿಂಗ್ ಠಾಕೂರ್ ತಮಗೇ ಟಿಕೆಟ್ ಸಿಗಲಿದೆ ಎನ್ನುತ್ತಿದ್ದಾರೆ.

ಜೆಡಿಎಸ್ ಜತೆಗಿನ ಮೈತ್ರಿ ಹಿನ್ನೆಲೆಯಲ್ಲಿ ಈ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಜುಲ್ಫಿಕರ್ ಹಾಶ್ಮಿ ಕಣಕ್ಕಿಳಿಯಲಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಮರ ಪ್ರಾಬಲ್ಯವಿದೆ. ಲಿಂಗಾಯತ, ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಮತಗಳೂ ಹೆಚ್ಚಿನ ಪ್ರಮಾಣದಲ್ಲಿವೆ. ಬಿಎಸ್ಪಿ ಸ್ಪರ್ಧೆಯಿಂದಾಗಿ, ಅದರಲ್ಲೂ ಆ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿ ಸ್ಪರ್ಧಿಸುತ್ತಿರುವುದರಿಂದಾಗಿ ಕಾಂಗ್ರೆಸ್ಸಿಗೆ ಮತ ವಿಭಜನೆ ಆತಂಕವಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!