ಟ್ವಿಟರ್‌ನಲ್ಲಿ #ConnectUsToMangalore ಟ್ರೆಂಡಿಂಗ್

Published : Aug 24, 2018, 12:25 PM ISTUpdated : Sep 09, 2018, 10:17 PM IST
ಟ್ವಿಟರ್‌ನಲ್ಲಿ #ConnectUsToMangalore ಟ್ರೆಂಡಿಂಗ್

ಸಾರಾಂಶ

ಬೆಂಗಳೂರಿನಿಂದ ಸಂಪರ್ಕ ಕಳೆದುಕೊಂಡಿರುವ ಮಂಗಳೂರು  ಪರ್ಯಾಯ ರಸ್ತೆಯಿಂದ ಪರಿಹಾರ ಸಿಕ್ಕಿಲ್ಲ; ಪ್ರಯಾಣವೆಂದರೆ ತಲೆನೋವು ಟ್ವಿಟರ್‌ನಲ್ಲಿ #ConnectUsToMangalore ಮನವಿಗಳ ಸುರಿಮಳೆ  

ಬೆಂಗಳೂರು ಮಂಗಳೂರು ನಡುವೆ ಸರಿಯಾದ ಸಂಪರ್ಕವನ್ನು ಕಲ್ಪಿಸಿ ಎಂದು ಕರಾವಳಿ ಜನ ಆರಂಭಿಸಿರುವ  #ConnectUsToMangalore ಎಂಬ ಅಭಿಯಾನ ಶುಕ್ರವಾರ ಟ್ವಿಟರ್ ನಲ್ಲಿ ಟ್ರೆಂಡ್ ಆಗುತ್ತಿದೆ. 

ಕರ್ನಾಟಕ ಕರಾವಳಿಯು ರಾಜ್ಯ ರಾಜಧಾನಿಯಿಂದ  ಬಹುತೇಕ ಸಂಪರ್ಕವನ್ನು ಕಳೆದುಕೊಂಡಿದೆ. ಕರಾವಳಿ ಭಾಗಕ್ಕೆ ತಲುಪಲು ಪಶ್ಚಿಮ ಘಟ್ಟದಿಂದ ಹಾದು ಹೋಗಲೇ ಬೇಕು. ಆದರೆ ರೈಲು ಮತ್ತು ರಸ್ತೆ ಮಾರ್ಗ ಮುಚ್ಚಿ ಹೋಗಿದ್ದು, ಪರ್ಯಾಯ ರಸ್ತೆಯನ್ನು ಅವಲಂಬಿಸೋಣವೆಂದರೆ, ಅವುಗಳು ಪ್ರಯಾಣಿಕರಿಗೆ ಸಿಂಹಸ್ವಪ್ನವಾಗಿದೆ. 

ಮಂಗಳೂರಿನ ಜನರ ಬೇಡಿಕೆ ಶಾಸಕರುಗಳು ಕೂಡಾ ಸಾಥ್ ನೀಡಿದ್ದಾರೆ. ಟ್ವಿಟರ್‌ನಲ್ಲಿ ಯಾರ್ಯಾರು ಏನೇನು ಹೇಳ್ತಿದ್ದಾರೆ ಎಂದು ನೋಡುವುದಾದರೆ... 

ಮಂಗಳೂರು ತಲುಪಲು ಪ್ರಮುಖವಾಗಿರುವ ರೈಲು ಮಾರ್ಗ ಹಾಗೂ ಶಿರಾಡಿ ಘಾಟ್ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿಯು ಗುಡ್ಡಕುಸಿತದಿಂದ ಮುಚ್ಚಿಹೋಗಿದೆ. ಕೊಡಗಿನಿಂದ ಸಂಪಾಜೆ ಘಾಟಿಯ ಮೂಲಕ  ಹಾದುಹೋಗುವ ಪರ್ಯಾಯ ರಸ್ತೆ  ಪ್ರವಾಹದಲ್ಲಿ ಕೊಚ್ಚಿ ಹೋಗಿದೆ.  ಬಾಕಿ ಉಳಿದಿರುವುದು  ಚಾರ್ಮಾಡಿ ಘಾಟಿ ಕೂಡಾ ಬಹಳ ಕಿರಿದಾಗಿದ್ದು, ಗುಡ್ಡ ಕುಸಿತ ಭಯ ಯಾವತ್ತಿಗೂ ಇದ್ದದ್ದೇ.  ಇತರ ಎಲ್ಲಾ ರಸ್ತೆಗಳು ಮುಚ್ಚಿಹೋಗಿರುವ ಹಿನ್ನೆಲೆಯಲ್ಲಿ  ಈ ಕಿರಿದಾದ ರಸ್ತೆಯಲ್ಲಿ ವಾಹನ ದಟ್ಟಣೆ ಕೂಡಾ ಹೆಚ್ಚಾಗಿದೆ. ಅದ್ಯಾವಾಗ ಬ್ಲಾಕ್ ಆಗುತ್ತೋ, ಅಥವಾ ಮುಚ್ಚಿಹೋಗುತ್ತೋ ಎಂಬ ಭಯದಲ್ಲೇ ಪ್ರಯಾಣಿಕರು ಓಡಾಡುವ ಪರಿಸ್ಥಿತಿ. ಶೃಂಗೇರಿ -ಆಗುಂಬೆ ಘಾಟಿಯ ಮೂಲಕ ಉಡುಪಿ/ಮಂಗಳೂರು ತಲುಪಬಹುದಾದರೂ ಆಗುಂಬೆಯಲ್ಲಿ ದೊಡ್ಡವಾಹನಗಳಿಗೆ ಪ್ರವೇಶವಿಲ್ಲ.  

ಬೆಂಗಳೂರಿನಲ್ಲಿ ನೆಲೆಸಿರುವ ಮಂಗಳೂರಿಗರು ಟ್ವಿಟರ್ ನಲ್ಲಿ #ConnectUsToMangalore ಎಂಬ ಅಭಿಯಾನವನ್ನೇ ಆರಂಭಿಸಿದ್ದಾರೆ. ಮಂಗಳೂರಿಗೆ ಸಮರ್ಪಕವಾದ ರಸ್ತೆ ಸಂಪರ್ಕವನ್ನು ಕಲ್ಪಿಸಬೇಕೆಂದು ಟ್ವೀಟರ್ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!