
ನವದೆಹಲಿ: ಯಾವುದೇ ಧರ್ಮ ನೋಡದೆ, ಎಲ್ಲರಿಗೂ ದೇವಸ್ಥಾನದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಪುರಿ ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿಗೆ ಆದೇಶಿಸಿದೆ.
‘ಹಿಂದುತ್ವ ಯಾವುದೇ ನಂಬಿಕೆಯನ್ನು ನಾಶಪಡಿಸಲು ಬಯಸುವುದಿಲ್ಲ. ಅದು ಶತಮಾನಗಳ ಪ್ರೇರಣೆಯಿಂದ ಪ್ರತಿಫಲಿತವಾದುದು’ ಎಂದು ಹೇಳಿರುವ ನ್ಯಾ.ಆದರ್ಶ ಗೋಯಲ್ ನೇತೃತ್ವದ ನ್ಯಾಯಪೀಠ, ಹಿಂದಿನ ಆದೇಶವನ್ನು ಉಲ್ಲೇಖಿಸಿ ಈ ತೀರ್ಪು ನೀಡಿದೆ.
ಪುರಿ ಜಗನ್ನಾಥ ಮಂದಿರದ ಪವಾಡಗಳಿವು..
ದೇವಸ್ಥಾನದಲ್ಲಿ ಭಕ್ತರ ಮೇಲಿನ ದೌರ್ಜನ್ಯ ಮತ್ತು ಅನುವಂಶಿಕ ಅರ್ಚಕರ ರದ್ದತಿ ಹಾಗೂ ಅರ್ಚಕರ ನೇಮಕಾತಿ ಕುರಿತ ಸಮಸ್ಯೆಗಳ ಇತ್ಯರ್ಥಕ್ಕೆ ಎರಡು ವಾರಗಳೊಳಗೆ ಸಮಿತಿ ರಚಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.