
ಹಾವೇರಿ :ಮೋದಿ ಪರವಾಗಿ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಟೌನ್ ಠಾಣೆಯ ಮುಖ್ಯ ಪೇದೆಯನ್ನು ಅಮಾನತು ಮಾಡಲಾಗಿದೆ.
ಹಾವೇರಿ ಎಸ್ಪಿ ಪರಶುರಾಮ್ ಅವರು ಪೇದೆ ಜಯಂತ್ ಬಳಿಗಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಟೌನ್ ಠಾಣೆಯಲ್ಲಿ ಜಯಂತ್ ಸೇವೆ ಸಲ್ಲಿಸುತ್ತಿದ್ದರು.
ಸಂದೇಶದಲ್ಲಿ ಮೋದಿಯ ಬಗ್ಗೆ ಭಾರತೀಯರು ಹೆಮ್ಮೆ ಪಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ವಿಚಾರ ಸಂಬಂಧ ಇತಿಹಾಸವನ್ನೇ ಸೃಷ್ಟಿಸಿದ್ದಾರೆ.
ಮೋದಿಯವರನ್ನು ಬೆಂಬಲಿಸಿ. ಅವರನ್ನು ಬೆಂಬಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಸಂದೇಶ ರವಾನೆ ಮಾಡಿದ್ದರು. ಈ ನಿಟ್ಟಿನಲ್ಲಿ ಪೇದೆ ಜಯಂತ್’ರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ