
ಬೆಂಗಳೂರು : ಪೊಲೀಸ್ ಪೇದೆಯೋರ್ವ ಬಿಜೆಪಿ ಶಿಕಾರಿಪುರ ಫೇಸ್ ಬುಕ್ ಪೇಜ್ ನಲ್ಲಿ ಹಾಕಿದ್ದ ಕುಮಾರ ಸ್ವಾಮಿಯವರೇ ರಾಜೀನಾಮೆ ಯಾವಾಗ ಎಂಬ ಪೋಸ್ಟ್ ಶೇರ್ ಮಾಡಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.
ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೇದೆ ಅರುಣ್ ಡೊಳ್ಳಿನ್ ಸರ್ಕಾರಿ ಸೇವೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಪೋಸ್ಟ್ ಶೇರ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
18 ದಿನ ಕಳೆದರೂ ಕೂಡ ಸಾಲಮನ್ನಾ ಮಾಡಿಲ್ಲವೆಂದು ಬಿಜೆಪಿಯ ರಾಜೀನಾಮೆ ಯಾವಾಗ ಎಂಬ ಪೋಸ್ಟ್ ಶೇರ್ ಮಾಡಿದ್ದರು. ಅಲ್ಲದೇ ಕಾಂಗ್ರೆಸ್- ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರದ ಪೋಸ್ಟ್ ಕೂಡ ಶೇರ್ ಮಾಡಿದ್ದರು.
ಸರ್ಕಾರಿ ಸೇವೆಯಲ್ಲಿದ್ದುಕೊಂಡು ಬಿಜೆಪಿ ಕಾರ್ಯಕರ್ತರ ರೀತಿ ಪ್ರಚಾರ ಮಾಡುತ್ತಿದ್ದರು. ಅಲ್ಲದೇ ಈ ಹಿಂದೆಯೂ ಕೂಡ ಬಿಜೆಪಿ ಪರವಾದ ಅನೇಕ ವಿಡಿಯೋಗಳನ್ನು ಶೇರ್ ಮಾಡಿದ್ದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.