ಅಯೋಧ್ಯೆ ರಾಮಮಂದಿರ ಜಾಗದಲ್ಲಿ ಬುದ್ಧ ದೇವಾಲಯ?

Published : Oct 22, 2018, 01:49 PM IST
ಅಯೋಧ್ಯೆ ರಾಮಮಂದಿರ  ಜಾಗದಲ್ಲಿ ಬುದ್ಧ ದೇವಾಲಯ?

ಸಾರಾಂಶ

ಅಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಇದೀಗ ಹೊಸ ಟ್ವಿಸ್ಟ್ ಒಂದು ದೊರಕಿದೆ. ರಾಮಮಂದಿರ ಜಾಗದಲ್ಲಿ ಬುದ್ಧನ ಮಂದಿರವನ್ನು ನಿರ್ಮಾಣ ಮಾಡಬೇಕು ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ .

ಲಕ್ನೋ :  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಿಜಿಪಿ ಬಹರೇಚ್ ಸಂಸದೆ ಸಾವಿತ್ರಿ ಬಾಯಿ ಪುಲೆ ಅವರು ತಮ್ಮ ಪಕ್ಷವನ್ನು ನಿರಂತರವಾಗಿ ಟೀಕಿಸುತ್ತಾ ಬಂದಿದ್ದು ಇದೀಗ ಅಯೋಧ್ಯೆಯಲ್ಲಿ ಬುದ್ಧನ ಮಂದಿರ ನಿರ್ಮಾಣವಾಗಬೇಕು ಎಂದು ಹೇಳಿದ್ದಾರೆ. 

ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಯ ಮನವಿ ಮಾಡಿದ ಬೆನ್ನಲ್ಲೇ ಸಾವಿತ್ರಿ ಬಾಯಿ ಅವರು ಈ ಹೇಳಿಕೆ ನೀಡಿದ್ದಾರೆ. 

ಅನೇಕ ರೀತಿಯ ಸಂಶೋಧನೆಗಳನ್ನು ಸ್ಥಳದಲ್ಲಿ ನಡೆದ ಪರಿಶೀಲನೆಯಲ್ಲಿ ಈ ಸ್ಥಳ ಬೌದ್ಧ ಧರ್ಮಕ್ಕೆ ಸೇರಿದ ಸ್ಥಳವೆಂದು ತಿಳಿದು ಬಂದಿದೆ. 

ಬೌದ್ಧ ಧರ್ಮ ಒಂದೇ ಜಾತಿ, ಮೇಲು, ಕೀಳು ಎನ್ನುವುದು ಇಲ್ಲದಂತಹ ಉತ್ತಮ ಸೌಹಾರ್ಧತೆಯನ್ನು ಹೊಂದಿರುವಂತದಾಗಿದೆ ಎಂದು ಅವರು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
ಚಾಮರಾಜನಗರ: ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ