ಬೆಂಗಳೂರು(ಅ.05): ಬೆಂಗಳೂರಲ್ಲಿ ನಿರ್ಮಾಣ ಹಂತದಲ್ಲಿದ 5 ಅಂತಸ್ತಿನ ಕಟ್ಟಡವೊಂದು ಕುಸಿ, ಅವಶೇಷಗಳಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಸುಮಾರು 8-10 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಾರತಹಳ್ಳಿ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದ್ದು, ಕಾಮಗಾರಿ ನಡೆಯುತ್ತಿದ್ದ ವೇಳೆ 5 ಅಂತಸ್ತಿನ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿ ಸಿಲುಕಿದ್ದ ನಾಲ್ವರು ಕಾರ್ಮಿಕರ ರಕ್ಷಣೆ ಮಾಡಲಾಗಿದ್ದು , ಗಾಯಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಒರಿಸ್ಸಾ ಮೂಲದ ಸೆಕ್ಯೂರಿಟಿ ಗಾರ್ಡ್ ಅಶೋಕ್(40) ಮೃತ ವ್ಯಕ್ತಿ. ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು ಎನ್ನಲಾಗಿದ್ದು, ಈ ಕಟ್ಟದ ಶ್ರೀನಿವಾಸ್ ರೆಡ್ಡಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಭರದಿಂದ ಸಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಉಪನಿರ್ದೇಶಕ ಮಾರ್ಕಂಡಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.