
ನವದೆಹಲಿ (ನ.11): 2011 ರಲ್ಲಿ ನಡೆದ ಕೇರಳದ ಸೌಮ್ಯಾ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಅಪರಾಧಿಯ ಶಿಕ್ಷೆ ಅವಧಿಯನ್ನು ಕಡಿಮೆಗೊಳಿಸಿರುವ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ನ್ಯಾ.ಮಾರ್ಕಂಡೇಯ ಕಾಟ್ಜುವಿಗೆ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ನೀಡಿದೆ.
ತಮ್ಮ ನಿಲುವನ್ನು ವ್ಯಕ್ತಪಡಿಸಲು ಕಾಟ್ಜುರವರು ಇಂದು ನ್ಯಾಯಾಲಯದೆದುರು ಹಾಜರಾದರು.
ಕಾಟ್ಜುರವರು ಹೇಳಿಕೆ ನೀಡಿರುವುದು ತೀರ್ಪಿನ ಬಗ್ಗೆಯಲ್ಲ. ಬದಲಿಗೆ ತೀರ್ಪು ನೀಡಿದ ನ್ಯಾಯಾಧೀಶರ ಬಗ್ಗೆಯೆಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಟ್ಜು ನಾನು ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ಸೌಮ್ಯಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಆರೋಪಿ ಗೋವಿಂದಸ್ವಾಮಿಗೆ ಕೆಳ ಹಂತದ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಸೂಕ್ತ ಸಾಕ್ಷಾಧಾರವಿಲ್ಲದಿರುವುದರಿಂದ ಸುಪ್ರೀಂಕೋರ್ಟ್ ಶಿಕ್ಷೆಯನ್ನು 14 ವರ್ಷಕ್ಕಿಳಿಸಿತ್ತು. ಇದ ಕಾಟ್ಜು “ ಸೌಮ್ಯಾ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸುವಲ್ಲಿ ಸುಪ್ರೀಂಕೋರ್ಟ್ ಎಡವಿದೆ. ಈ ತೀರ್ಪನ್ನು ಪುನರ್ ಪರಿಶೀಲಿಸಬೇಕು" ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.