'ಲೋಕಸಭಾ ಚುನಾವಣೆಗೆ ಸ್ಪರ್ಧೆ ನನ್ನ ಜೀವನದ ಅತಿ ದೊಡ್ಡ ತಪ್ಪು'

Published : Jul 29, 2019, 07:38 AM IST
'ಲೋಕಸಭಾ ಚುನಾವಣೆಗೆ ಸ್ಪರ್ಧೆ ನನ್ನ ಜೀವನದ ಅತಿ ದೊಡ್ಡ ತಪ್ಪು'

ಸಾರಾಂಶ

ಲೋಕಸಭಾ ಚುನಾವಣೆಗೆ ಸ್ಪರ್ಧೆ| ನನ್ನ ಜೀವನದ ಅತಿ ದೊಡ್ಡ ತಪ್ಪು| ಕಾಂಗ್ರೆಸ್‌ ಸದಸ್ಯ ನಂದನ್‌ ನಿಲೇಕಣಿ ಪಶ್ಚಾತ್ತಾಪ

ನವದೆಹಲಿ[ಜು.29]: ‘2014ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ನನ್ನ ಜೀವನದಲ್ಲಿ ನಾನು ಮಾಡಿದ ಅತಿದೊಡ್ಡ ತಪ್ಪು, ಅದರಿಂದ ನಾನು ಪಾಠ ಕಲಿತಿದ್ದೇನೆ ಎಂದು ಇಸ್ಫೋಸಿಸ್‌ ಸಂಸ್ಥಾಪಕ ಮತ್ತು ಕಾಂಗ್ರೆಸ್ಸಿಗ ನಂದನ್‌ ನಿಲೇಕಣಿ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ ನಿಲೇಕಣಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯ ವೇಳೆ ವಿಶಿಷ್ಟಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ)ದ ಅಧ್ಯಕ್ಷರಾಗಿದ್ದ ನಂದನ್‌ ನಿಲೇಕಣಿ, ಆ ಹುದ್ದೆಗೆ ರಾಜೀನಾಮೆ ನೀಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅನಂತ್‌ಕುಮಾರ್‌ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 3.2 ಲಕ್ಷ ಮತಗಳ ಅಂತರದಿಂದ ಸೋಲು ಕಂಡಿದ್ದರು.

ಬಳಿಕವೂ ಅವರು ಕಾಂಗ್ರೆಸ್‌ನ ಸದಸ್ಯರಾಗಿ ಮುಂದುವರೆದಿರುವರಾದರೂ, ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?