
ಹುಬ್ಬಳ್ಳಿ: ಇಲ್ಲಿನ ಗಣೇಶಪೇಟೆಯಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದ್ದು, ಪಾಕಿಸ್ತಾನವನ್ನು ಅಲ್ಲಿಗೇ ಹೋಗಿ ನೋಡಬೇಕೆಂದಿಲ್ಲ ಎಂದು ಮೌಲ್ವಿಯೊಬ್ಬರು ಶನಿವಾರ ಈದ್ಮಿಲಾದ್ ಆಚರಣೆ ವೇಳೆ ವಿವಾದಾತ್ಮಕ ಭಾಷಣ ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ.
ನಗರದ ಗಣೇಶಪೇಟೆಯಲ್ಲಿ ಮಸೀದಿಯಲ್ಲಿ ನಡೆದ ಈದ್ ಮಿಲಾದ್ ಆಚರಣೆ ವೇಳೆ ಭಾಷಣ ಮಾಡಿರುವ ಮೌಲ್ವಿ, ಇಲ್ಲಿಯೇ ಪಾಕಿಸ್ತಾನ ನಿರ್ಮಾಣವಾಗಿದೆ. ಪಾಕಿಸ್ತಾನ ನೋಡಲು ಅಲ್ಲಿಗೇ ಹೋಗಬೇಕಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಎಸಿಪಿ ಎಚ್.ಜಿ. ದಾವೂದ್ ಖಾನ್ ಮತ್ತಿತರ ಪೊಲೀಸರೂ ಕಾರ್ಯಕ್ರಮದಲ್ಲಿ ಹಾಜರಿದ್ದರೂ ವಿವಾದಾತ್ಮಕ ಭಾಷಣಕ್ಕೆ ತಡೆಯೊಡ್ಡಿಲ್ಲ. ಈ ವಿಚಾರವಾಗಿ ಎಸಿಪಿ ದಾವುದ್ಖಾನ್ ಅವರನ್ನು ಸಂಪರ್ಕಿಸಿದಾಗ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಿಲ್ಲ. ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಅವರನ್ನು ಸಂಪರ್ಕಿಸಿದಾಗ, ‘ಮೌಲ್ವಿಯವರು ಯಾವುದೇ ವಿವಾದಾತ್ಮಕ ಭಾಷಣ ಮಾಡಿಲ್ಲ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ.
ಎಲ್ಲರೂ ಒಗ್ಗಟ್ಟಾಗಿ ಬಾಳಬೇಕೆಂದು ಮೌಲ್ವಿಯವರು ಹೇಳಿದ್ದಾರೆ ಎಂದರು. ಆದರೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಮೌಲ್ವಿಯವರ ಭಾಷಣದ ವಿಡಿಯೋದಲ್ಲಿ ‘ಗಣೇಶಪೇಟೆ ಪಾಕಿಸ್ತಾನದಂತೆ ಕಾಣುತ್ತಿದೆ’ ಎಂದಿರುವುದು ಸ್ಪಷ್ಟವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.