‘ಒಬ್ಬ ತಂದೆಗೆ ಹುಟ್ಟಿದೋರು ಲಿಂಗಾಯತರು; 5 ಜನ ತಂದೆಗಳಿಗೆ ಹುಟ್ಟಿದೋರು ವೀರಶೈವರು'

Published : Nov 05, 2017, 04:19 PM ISTUpdated : Apr 11, 2018, 01:08 PM IST
‘ಒಬ್ಬ ತಂದೆಗೆ ಹುಟ್ಟಿದೋರು ಲಿಂಗಾಯತರು; 5 ಜನ ತಂದೆಗಳಿಗೆ ಹುಟ್ಟಿದೋರು ವೀರಶೈವರು'

ಸಾರಾಂಶ

ಇಲ್ಲಿ ನಡೆದ  ಲಿಂಗಾಯತ ಸಮಾವೇಶದಲ್ಲಿ  ಪಂಚಮಸಾಲಿ ಪೀಠದ ಶ್ರೀಗಳು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘನತೆವೆತ್ತ ಸ್ವಾಮಿಗಳು ತಮ್ಮ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಮಾತನಾಡಿದ್ದಾರೆ.

ಹುಬ್ಬಳ್ಳಿ (ನ.05): ಇಲ್ಲಿ ನಡೆದ  ಲಿಂಗಾಯತ ಸಮಾವೇಶದಲ್ಲಿ  ಪಂಚಮಸಾಲಿ ಪೀಠದ ಶ್ರೀಗಳು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘನತೆವೆತ್ತ ಸ್ವಾಮಿಗಳು ತಮ್ಮ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಮಾತನಾಡಿದ್ದಾರೆ.

ಒಂದು ತಂದೆಗೆ ಹುಟ್ಟಿದವರು ಲಿಂಗಾಯತರು. ಐದು ಜನ ತಂದೆಯವರಿಗೆ ಹುಟ್ಟಿದವರು ವೀರಶೈವರು.  ನೀವು ಒಂದು ತಂದೆಗೆ ಹುಟ್ಟಿದವರು ಎಂದು ಹೇಳಿಕೋಳ್ತೀರೋ ಅಥವಾ ಐದು ಜನ  ತಂದೆಗೆ ಹುಟ್ಟಿದವರು ಅಂತ ಹೇಳಿಕೊಳ್ತೀರಾ ಎಂದು ಶ್ರೀಗಳು ಪ್ರಶ್ನಿಸಿದ್ದಾರೆ.  ನಮ್ಮ‌ತಂದೆ ಒಬ್ಬನೇ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಮಾವೇಶದಲ್ಲಿ ಹೇಳಿದ್ದಾರೆ.

ಇನ್ನು ಈ ಸಮಾವೇಶದಲ್ಲಿ  ಸುಲಫಲ ಮಠದ ಸ್ವಾಮೀಜಿಗಳು ಕೂಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ವೀರಶೈವ ಪಂಚಪೀಠಾಧೀಶ ಹೇಗೆ ಹುಟ್ಟಿದ್ದಾರೆ? ಎಲ್ಲಿ ಹುಟ್ಟಿದ್ದಾರೆ? ನಮಗೆ ಗೊತ್ತಿದೆ.  ಸಮಾಜದಲ್ಲಿ ವಿಷ ಬಿತ್ತುವ ಕೆಲಸ ಪಂಚಾಚಾರ್ಯರೇ ಮಾಡುತ್ತಿದ್ದಾರೆ.  ಇಂತಹ ಸ್ವಾಮಿಗಳನ್ನ ಕಲ್ಲು ತಗೊಂಡು ಹೊಡಿರಿ ಎಂದು ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ