
ಬೆಂಗಳೂರು[ಮಾ. 05] ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಕ್ಷಮೆ ಕೇಳಿದ್ದಾರೆ.
ಈ ಬಗ್ಗೆ ಸುವರ್ಣ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಗೋಪಾಲಕೃಷ್ಣ, ರಾಷ್ಟ್ರಪಿತ ಗಾಂಧೀಜಿ ಅವರಿಗೆ ವಿಎಚ್.ಪಿಯ ಪೂಜಾ ಪಾಂಡೆ ಅವರು ಬಂದೂಕು ತೋರಿಸಿದ್ದರು. ಇದನ್ನ ಸಹಿಸಲಾಗದೇ ನಾನು ಬಿಜೆಪಿಯವರಿಗೆ ನಿಮ್ಮ ನಾಯಕರಾದ ಮೋದಿ ಅವರಿಗೆ ಹೀಗೆ ಗನ್ ಹಿಡಿಯುತ್ತೀರಾ ಎಂದು ಪ್ರಶ್ನಿಸಿದ್ದೆ.
'ಪ್ರಧಾನಿ ನರೇಂದ್ರ ಮೋದಿ ಗುಂಡಿಟ್ಟು ಕೊಲ್ಲಿ’ ಬೇಳೂರಿಂದ ಇದೆಂತಾ ಮಾತು
ಪ್ರಧಾನಿ ಅವರ ಕೊಲೆ ಮಾಡಬೇಕು ಅನ್ನೋ ಉದ್ದೇಶದಲ್ಲಿ ನಾನು ಮಾತಾಡಿಲ್ಲ. ನನ್ನ ಹೇಳಿಕೆಯಿಂದ ಯಾರ ಮನಸಿಗಾದರು ನೋವಾಗಿದ್ದರೇ ನಾನು ಕ್ಷಮೆ ಕೋರುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.