
ಚೆನ್ನೈ (ಆ. 19): ಕೇರಳದಲ್ಲಿ ಪ್ರವಾಹ ಉಂಟಾಗಿರುವುದಕ್ಕೂ, ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೂ ಏನಾದರೂ ಸಂಬಂಧ ಇದೆಯೇ? ಆದರೆ, ಕೆಲವು ಟ್ವೀಟರ್ ಬಳಕೆದಾರರು ಮಾತ್ರ ‘ಮಹಿಳೆಯರು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಲು ಬಯಸಿದ್ದರಿಂದಲೇ ಕೇರಳದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಅಯ್ಯಪ್ಪಸ್ವಾಮಿ ಮುನಿಸಿಕೊಂಡಿದ್ದರಿಂದ ಅನಾಹುತ ಸೃಷ್ಟಿಯಾಗಿದೆ’ ಎಂದು ವಾದಿಸಿದ್ದಾರೆ.
ಆರ್ಬಿಐ ಮಂಡಳಿಗೆ ನೇಮಕಗೊಂಡಿರುವ ಹಿರಿಯ ಪತ್ರಕರ್ತ ಎಸ್. ಗುರುಮೂರ್ತಿ ಅವರು ಕೂಡ ಇದೇ ರೀತಿ ಅರ್ಥಬರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಶಬರಿಮಲೆಯಲ್ಲಿ ಪ್ರವಾಹ ಉಂಟಾಗಿರುವುದಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ಸಂಗತಿಯೂ ಕಾರಣವೇ ಎಂಬ ವಿಚಾರವನ್ನು ಗುರುಮೂರ್ತಿ ಅವರು ತೇಲಿ ಬಿಟ್ಟಿದ್ದಾರೆ. ‘ಈ ವಿಷಯವಾಗಿ ಕೂಡ ಸುಪ್ರೀಂಕೋರ್ಟ್ ಪರಿಶೀಲನೆ ನಡೆಸಬಹುದು. ಒಂದು ವೇಳೆ ಲಕ್ಷದಲ್ಲಿ ಒಂದೇ ಒಂದು ಅಂಶದಷ್ಟುಸತ್ಯಾಂಶವಿದ್ದರೂ ಜನರು ಅಯ್ಯಪ್ಪನ ವಿರದ್ಧವಾಗಿ ನಡೆದುಕೊಳ್ಳಲು ಇಚ್ಛಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಭಾರೀ ಟೀಕೆಗಳು ವ್ಯಕ್ತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.