
ಚಂದೌಲಿ [ಉತ್ತರಪ್ರದೇಶ], [ಜ.20]:ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಸಾಧನಾ ಸಿಂಗ್ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉತ್ತರಪ್ರದೇಶದ ಚಂದೌಲಿ ಎಂಬಲ್ಲಿ ಶನಿವಾರ ನಡೆದ ಬಿಜೆಪಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಗಲ್ಸರಾಯ್ ಕ್ಷೇತ್ರದ ಬಿಜೆಪಿ ಶಾಸಕಿ ಸಾಧನಾ ಸಿಂಗ್, ಮಾಯಾವತಿಗೆ ಪ್ರತಿಷ್ಠೆ, ಘನತೆ ಎಂಬುದೇ ಗೊತ್ತಿಲ್ಲ. ಆಕೆ ಅತ್ತ ಗಂಡಸೂ ಅಲ್ಲ, ಇತ್ತ ಹೆಂಗಸೂ ಅಲ್ಲ. ನಪುಂಸಕರಿಗಿಂತಲೂ ಕಡೆ ಎಂದು ವಿವದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇಷ್ಟಕ್ಕೆ ಸುಮ್ಮನಾಗದ ಸಾಧನಾ ಸಿಂಗ್, ಲಖನೌ ಗೆಸ್ಟ್ ಹೌಸ್ ಪ್ರಕರಣದಲ್ಲಿ ಆಕೆಯ ಬಟ್ಟೆಯನ್ನು ಎಸ್ಪಿ ಕಾರ್ಯಕರ್ತರು ಹರಿದು ಹಾಕಿದ್ದರು.
ಆದರೂ, ಈಗ ಅಧಿಕಾರಕ್ಕಾಗಿ ಮರ್ಯಾದೆ ಮರೆತು ಮೈತ್ರಿ ಮಾಡಿಕೊಂಡಿದ್ದಾರೆ. ಅಕೆಯ ನಡೆಯನ್ನು ದೇಶದ ಮಹಿಳಾ ಸಮುದಾಯ ಖಂಡಿಸಬೇಕು ಎಂದು ಕಟು ಶಬ್ಧಗಳಿಂದ ವಾಗ್ದಾಳಿ ನಡೆಸಿದರು.
ಇದೀಗ ಇಂತಹ ಹೇಳಿಕೆ ನೀಡಿ ಸಂಕಷ್ಟಕ್ಕೆ ಗುರಿಯಾಗಿದ್ದು, ಅವಹೇಳನ ಮಾಡಿದ್ದ ಬಿಜೆಪಿ ಶಾಸಕಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಈ ಹೇಳಿಕೆ ಹಲವು ಟೀಕೆಗಳಿಗೆ ಗುರಿಯಾಗುತ್ತಿದ್ದಂತೆ ಎಚ್ಚೆತ್ತ ಸಾಧನಾ ಸಿಂಗ್ ತನ್ನ ಮಾತಿನ ಬಗ್ಗೆ ಕ್ಷಮೆ ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ