
ನವದೆಹಲಿ[ಮಾ.06]: ಪುಲ್ವಾಮಾ ದಾಳಿಯನ್ನು ಒಂದು ದುರ್ಘಟನೆ ಎಂದು ಕರೆಯುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವಿವಾದಕ್ಕೆ ಸಿಲುಕಿದ್ದಾರೆ. ತಮ್ಮ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬಳಿಕ ಇದೊಂದು ಭಯೋತ್ಪಾದಕ ಘಟನೆ ಎಂದು ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಇದೇ ವೇಳೆ ದಿಗ್ವಿಜಯ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ.ಕೆ. ಸಿಂಗ್, ಭಯೋತ್ಪಾದಕ ದಾಳಿಯನ್ನು ಒಂದು ದುರ್ಘಟನೆ ಎಂದು ಕರೆಯುವುದು ನಮ್ಮ ದೇಶದಲ್ಲಿ ರಾಜಕೀಯ ಉಪನ್ಯಾಸ ಆಗಬಾರದು. ನೀವು ರಾಜೀವ್ ಗಾಂಧಿ ಹತ್ಯೆಯನ್ನು ಒಂದು ಅಪಘಾತ ಎಂದು ಕರೆಯುತ್ತೀರಾ? ಸಂವೇದನಾ ರಹಿತ ಹೇಳಿಕೆ ನೀಡಿ ದೇಶದ ಮತ್ತು ಸೇನಾ ಪಡೆಗಳ ನೈತಿಕತೆಯನ್ನು ದುರ್ಬಲ ಗೊಳಿಸಬೇಡಿ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಪುಲ್ವಾಮಾ ದಾಳಿ ಸಂಬಂಧ ಹೇಳಿಕೆ ನೀಡಿರುವ ದಿಗ್ವಿಜಯ್ ಸಿಂಗ್ ವಿವಾದಕ್ಕೀಡಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.