ವಿದ್ಯುತ್‌ ಶಾಕ್‌ಗೆ ಮಕ್ಕಳು ಬಲಿ: ಆಯೋಗ ಗರಂ

Published : Sep 28, 2019, 10:03 AM IST
ವಿದ್ಯುತ್‌ ಶಾಕ್‌ಗೆ ಮಕ್ಕಳು  ಬಲಿ: ಆಯೋಗ ಗರಂ

ಸಾರಾಂಶ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್‌ ಅವಘಡಗಳಿಂದಾಗಿ ಮಕ್ಕಳ ಪ್ರಾಣ ಹಾನಿಯಾಗುತ್ತಿದೆ. ಈ ಕುರಿತಂತೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ದೇವರಾಜ ಅರಸು ವಿದ್ಯಾರ್ಥಿ ನಿಲಯದ ಪ್ರಕರಣ ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಅವಘಡಗಳ ಸಂಬಂಧ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. 

ಬೆಂಗಳೂರು (ಸೆ. 28): ರಾಜ್ಯದಾದ್ಯಂತ ವಿದ್ಯುತ್‌ ಅವಘಡಗಳಿಗೆ ಮಕ್ಕಳು ತುತ್ತಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೂರು ತಿಂಗಳ ಒಳಗಾಗಿ ಶಿಫಾರಸ್ಸುಗಳ ಅನ್ವಯ ಕೈಗೊಂಡ ಸುರಕ್ಷತಾ ಕ್ರಮಗಳ ಕುರಿತಂತೆ ಸಂಪೂರ್ಣ ವರದಿ ಸಲ್ಲಿಸಲು ಇಂಧನ ಇಲಾಖೆಗೆ ಸೂಚಿಸಿದೆ.

ಪಿಂಚಣಿಗಾಗಿ ಅ. 17 ಕ್ಕೆ ಬಿಸಿಯೂಟ ನೌಕರರಿಂದ ರಾಜ್ಯಾದ್ಯಂತ ಪ್ರತಿಭಟನೆ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್‌ ಅವಘಡಗಳಿಂದಾಗಿ ಮಕ್ಕಳ ಪ್ರಾಣ ಹಾನಿಯಾಗುತ್ತಿದೆ. ಈ ಕುರಿತಂತೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ದೇವರಾಜ ಅರಸು ವಿದ್ಯಾರ್ಥಿ ನಿಲಯದ ಪ್ರಕರಣ ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಅವಘಡಗಳ ಸಂಬಂಧ ಮಕ್ಕಳ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ 7 ಪ್ರಕರಣ ನಡೆದಿದ್ದು, ಈ ಪೈಕಿ ಕೊಪ್ಪಳ (5 ಮಕ್ಕಳು), ಚಿತ್ರದುರ್ಗ(2), ಕುಷ್ಟಗಿ (2) ಹಾಗೂ ಬೆಂಗಳೂರು ನಗರ (3) ಸೇರಿದಂತೆ 12 ಮಕ್ಕಳು ಸಾವನ್ನಪ್ಪಿದ್ದಾರೆ. ಹಾಗಾಗಿ ಈ ಸಂಬಂಧ ಇಂಧನ ಇಲಾಖೆ ಪಾಲಿಸಬೇಕಾದ ಕ್ರಮಗಳ ಬಗ್ಗೆ ಆಯೋಗ ಶಿಫಾರಸು ಮಾಡಿದ್ದು, ಇದರ ಅನುಷ್ಠಾನಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕೆಂದು ಆಯೋಗ ಕೋರಿದೆ.

ಸಾಳ್ವೆಗೆ 1 ರೂ ಸಂಭಾವನೆ ಹಸ್ತಾಂತರ; ಸುಷ್ಮಾ ಕೊನೆ ಆಸೆ ಪೂರೈಸಿದ ಪುತ್ರಿ!

ವಿದ್ಯುತ್‌ ಅವಘಡದಲ್ಲಿ ಗಾಯಗೊಂಡ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸುವುದು, ವಾರದೊಳಗೆ ಪರಿಹಾರ ನೀಡುವುದು, ಪ್ರಾಣ ಹಾನಿ ಪ್ರಕರಣಗಳನ್ನು ತುರ್ತಾಗಿ ತನಿಖೆ ನಡೆಸಿ ವರದಿ ನೀಡುವುದು, ಪರಿಹಾರವನ್ನು ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಶಿಫಾರಸುಗಳನ್ನು ಇಂಧನ ಇಲಾಖೆಗೆ ಆಯೋಗದಿಂದ ಸಲ್ಲಿಸಲಾಗಿದೆ.

ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಹಾಗೂ ಕಟ್ಟಡ ಕಾಮಗಾರಿಗಳ ಸ್ಥಳದಲ್ಲಿ ಅಕ್ರಮ ಮತ್ತು ಅಸುರಕ್ಷಿತವಾದ ವಿದ್ಯುತ್‌ ಸಂಪರ್ಕದಿಂದ ಆಗುವ ಅನಾಹುತಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಲಾಖೆ ವತಿಯಿಂದ ಮಾರ್ಗಸೂಚಿ ಹೊರಡಿಸಬೇಕು. ಅದರ ಕಡ್ಡಾಯವಾದ ಅನುಸರಣೆಗೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು. ದುರಸ್ತಿಯಲ್ಲಿರುವ ವಿದ್ಯುತ್‌ ಕಂಬಗಳನ್ನು ಗುರುತಿಸಿ ಇಲಾಖೆಗೆ ವರದಿ ಸಲ್ಲಿಸಲು ಸಂಬಂಧಪಟ್ಟಅಧಿಕಾರಿಗಳಿಗೆ ಸೂಚಿಸಬೇಕು. ಹಾಗೆ ದುರಸ್ತಿಯಲ್ಲಿರುವ ಕಂಬಗಳನ್ನು ತುರ್ತಾಗಿ ತೆರವುಗೊಳಿಸಬೇಕು ಎಂದು ಶಿಫಾರಸ್ಸಿನಲ್ಲಿ ಸೂಚಿಸಲಾಗಿದೆ.

- ಸಾಂದರ್ಭಿಕ ಚಿತ್ರ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನದಿ ಸಮೀಪ ಡೆತ್ನೋಟ್ ಬರೆದಿಟ್ಟು ರೇ*ಪ್ ಆರೋಪಿ ಎಸ್ಕೇಪ್: ಆತನಿಗಾಗಿ ನದಿಯಲ್ಲಿ 3 ದಿನ ಹುಡುಕಿದ ಪೊಲೀಸರು
ಒಪ್ಪೊ ಫೈಂಡ್ X9 ಸೀರಿಸ್, ಪ್ರೋ ಲೆವಲ್ ಕ್ಯಾಮೆರಾ,AI ಟೂಲ್ಸ್ ಜೊತೆ ಸುದೀರ್ಘ ಸಮಯದ ಬ್ಯಾಟರಿ ಸ್ಮಾರ್ಟ್‌ಫೋನ್