
ತುಮಕೂರು(ನ.16): ಫೇಸ್ಬುಕ್ನಲ್ಲಿ ಕೋಮುಭಾವನೆ ಕೆರಳಿಸುವ ಪ್ರತಿಕ್ರಿಯೆ ನೀಡಿದ ಆರೋಪದ ಮೇರೆಗೆ ತುಮಕೂರು ಗ್ರಾಮಾಂತರ ವ್ಯಾಪ್ತಿಯ ಹೆಬ್ಬೂರು ಠಾಣೆಯ ಪೊಲೀಸ್ ಪೇದೆಯೊಬ್ಬರನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ. ‘ಮುಸ್ಲಿಮರಿಗೆ ಉಚಿತ ಗ್ಯಾಸ್ ಕೊಡಬೇಡಿ. ಅವರು ಬಿಜೆಪಿಗೆ ಮತ ಹಾಕಲ್ಲ’ ಎಂದು ಪೇದೆ ಎಂ.ಸಿ. ಮಹೇಶ್ ಕಾಮೆಂಟ್ ಮಾಡಿದ್ದರು. ಕೇಂದ್ರ ಸರ್ಕಾರದ ಉಚಿತ ಗ್ಯಾಸ್ ವಿತರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿಗಣೇಶ್ ಅವರು ಹಾಕಿದ್ದ ಪೋಸ್ಟ್ಗೆ ಅವರು ಈ ಕಾಮೆಂಟ್ ಹಾಕಿ ಎಡವಟ್ಟು ಮಾಡಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.