ಒಂದೇ ವೇದಿಕೆ, ಒಂದೇ ವಿನ್ಯಾಸ, ಬಿಲ್ ಮಾತ್ರ ಎರಡೆರಡು!

Published : Nov 22, 2017, 01:02 PM ISTUpdated : Apr 11, 2018, 12:50 PM IST
ಒಂದೇ ವೇದಿಕೆ, ಒಂದೇ ವಿನ್ಯಾಸ, ಬಿಲ್ ಮಾತ್ರ ಎರಡೆರಡು!

ಸಾರಾಂಶ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ 24ರಿಂದ ಆರಂಭವಾಗಲಿರುವ  83 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭ್ರಷ್ಟಾಚಾರವನ್ನು ಸಾಕ್ಷೀಕರಿಸುವ ಮತ್ತೊಂದು ಹಗರಣ ಬಯಲಾಗಿದೆ.

ಮೈಸೂರು (ನ.22): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ 24ರಿಂದ ಆರಂಭವಾಗಲಿರುವ 83 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭ್ರಷ್ಟಾಚಾರವನ್ನು ಸಾಕ್ಷೀಕರಿಸುವ ಮತ್ತೊಂದು ಹಗರಣ ಬಯಲಾಗಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮ್ಮೇಳನಕ್ಕಾಗಿ ಬೃಹತ್​ ವೇದಿಕೆ ಸಜ್ಜಾಗುತ್ತಿದ್ದು, ಪ್ರಧಾನ ವೇದಿಕೆಯೇ ನಕಲಿಯಾಗಿದೆ. ಅಂದರೆ, ಇದೇ ಮಹಾರಾಜ ಕಾಲೇಜು ಮೈದಾನದಲ್ಲಿ 2015ರ ಮಾರ್ಚ್​ 1ರಂದು ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. ಆಗ ಕಲಾವಿದ ಶಶಿಧರ್ ಅಡಪ ಮೈಸೂರು ಅರಮನೆಯ ದರ್ಬಾರ್​ ಹಾಲ್​ ಪರಿಕಲ್ಪನೆಯ ವೇದಿಕೆಯನ್ನು ನಿರ್ಮಿಸಿಕೊಟ್ಟಿದ್ದರು. ಆಗ ವೇದಿಕೆಗಾಗಿ ಸುಮಾರು 15 ಲಕ್ಷ ರೂಪಾಯಿ ಖರ್ಚಾಗಿತ್ತು. ಈಗ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಅದೇ ಪರಿಕಲ್ಪನೆಯಡಿ ವೇದಿಕೆ ನಿರ್ಮಿಸುತ್ತಿದ್ದು, ಇದಕ್ಕಾಗಿ ಸುಮಾರು 20 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಒಬ್ಬರೇ ಕಲಾವಿದರಿಗೆ ಒಂದೇ ಪರಿಕಲ್ಪನೆಗೆ ಇಷ್ಟೊಂದು ಹಣ ನೀಡುತ್ತಿರುವುದು ಭ್ರಷ್ಟಾಚಾರವಲ್ಲದೆ ಮತ್ತೇನು ಅಂತಾ ಸಾಹಿತಿ ಬನ್ನೂರು ಕೆ. ರಾಜು ಪ್ರಶ್ನಿಸಿದ್ದಾರೆ.

ಈಗಾಗಲೇ ಸಮ್ಮೇಳನದ ಪ್ರಚಾರಕ್ಕೆ ಹೊರಟ ಕನ್ನಡ ರಥವನ್ನೂ ಇದೇ ರೀತಿ ನಕಲು ಮಾಡಿದ್ದ ಸಾಹಿತ್ಯ ಪರಿಷತ್​ ಈಗ ಮತ್ತೆ ವೇದಿಕೆಯನ್ನು ನಕಲು ಮಾಡಿ ಲಕ್ಷಾಂತರ ರೂಪಾಯಿ ದುಂದು ವೆಚ್ಚ ಮಾಡಿ ಭ್ರಷ್ಟಾಚಾರ ಮಾಡಲು ಹೊರಟಿರುವುದು ಸಾಹಿತಿಗಳ ವಲಯದ ಆಕ್ರೋಶಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು
4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್ : ಮಹಿಳೆಯೂ ಆರೋಪಿ