
ನವದೆಹಲಿ (ಡಿ.14): ಅಗಸ್ಟಾ ವೆಸ್ಟ್’ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣ ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಸ್ಥಳೀಯ ನ್ಯಾಯಾಲಯವು ಇನ್ನೂ ಮೂರು ದಿನಗಳವೆರೆಗೆ ವಿಸ್ತರಿಸಿದೆ.
ಹಗರಣದಲ್ಲಿ ಆರೋಪಿಗಳಾದ ಮಾಜಿ ವಾಯುಪಡೆ ಮುಖ್ಯಸ್ಥ ಎಸ್.ಪಿ. ತ್ಯಾಗಿ, ಸಂಜೀವ್, ಹಾಗೂ ದೆಹಲಿ ವಕೀಲ ಗೌತಮ್ ಖೈತಾನ್ ಪೊಲೀಸ್ ಕಸ್ಟಡಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಸಿಬಿಐ ಮನವಿ ಮಾಡಿತ್ತು. ಆದರೆ ಪಟಿಯಾಲ ಕೋರ್ಟ್, ಆರೋಪಿಗಳ ಕಸ್ಟಡಿಯನ್ನು 3 ದಿನಗಳವೆರೆಗೆ ವಿಸ್ತರಿಸಿದೆ.
ಅಗಸ್ಟಾ ಕಂಪನಿಯ ಹಿರಿಯ ಅಧಿಕಾರಿಗಳನ್ನು ತಮ್ಮ ನಿವಾಸದಲ್ಲೇ ಭೇಟಿಯಾಗಿ ಎಸ್.ಪಿ.ತ್ಯಾಗಿ ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಸಿಬಿಐ ವಕೀಲರು ವಾದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.