ಆನೇಕಲ್ ತಹಶೀಲ್ದಾರ್'ಗೆ 25 ಸಾವಿರ ದಂಡ

Published : Sep 09, 2017, 01:30 PM ISTUpdated : Apr 11, 2018, 12:53 PM IST
ಆನೇಕಲ್ ತಹಶೀಲ್ದಾರ್'ಗೆ 25 ಸಾವಿರ ದಂಡ

ಸಾರಾಂಶ

ಹೈಕೋರ್ಟ್ ಆದೇಶ ಮಾಡಿದ್ದರೂ 8 ವರ್ಷಗಳಿಂದ ರಾಜ್ಯ ಸರ್ಕಾರವು ತಮಗೆ ಭೂಮಿ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿ ಆನೇಕಲ್ ನಿವಾಸಿಗಳಾದ ಗೋವಿಂದಯ್ಯ ಸೇರಿ ಮೂವರು ಸಲ್ಲಿಸಿದ್ದರು.

ಬೆಂಗಳೂರು(ಸೆ.09): ನ್ಯಾಯಾಲಯ ನಿರ್ದೇಶನ ನೀಡಿದ್ದರೂ ಆನೇಕಲ್‌ನಲ್ಲಿ ಖಾಸಗಿ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡುವುದಕ್ಕೆ ಬರೋಬ್ಬರಿ ಎಂಟು ವರ್ಷಗಳಿಂದ ಸತಾಯಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆನೇಕಲ್ ತಹಶೀಲ್ದಾರ್'ಗೆ ಹೈಕೋರ್ಟ್ 25 ಸಾವಿರ ರು. ದಂಡ ವಿಧಿಸಿದೆ.

ಹೈಕೋರ್ಟ್ ಆದೇಶ ಮಾಡಿದ್ದರೂ 8 ವರ್ಷಗಳಿಂದ ರಾಜ್ಯ ಸರ್ಕಾರವು ತಮಗೆ ಭೂಮಿ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿ ಆನೇಕಲ್ ನಿವಾಸಿಗಳಾದ ಗೋವಿಂದಯ್ಯ ಸೇರಿ ಮೂವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೋಠಾರಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿತು. ಆನೇಕಲ್ ತಾಲೂಕಿನಲ್ಲಿ ಗೋವಿಂದಯ್ಯ, ಗೌರಮ್ಮ ಮತ್ತು ರಾಜಮ್ಮ ಎಂಬುವರಿಗೆ ಸೇರಿದ ಜಮೀನನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಎದುರುಮನೆ ಹುಡುಗಿಯೊಂದಿಗೆ ಓಡಿಹೋದ ಮಗ; ತಾಯಿಗೆ ಮನಬಂದಂತೆ ಥಳಿಸಿದ ಲೋಕಲ್ ಪೊಲೀಸ್!