ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ವಾರೆಂಟ್​ ಜಾರಿ

By Web DeskFirst Published Feb 23, 2019, 8:06 PM IST
Highlights

ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರಿಗೆ ಶನಿವಾರ ಜಾಮೀನು ರಹಿತ ವಾರಂಟ್​ ಜಾರಿಯಾಗಿದೆ.

ಬೆಂಗಳೂರು, [ಫೆ.23]: ನಟ ಪ್ರಕಾಶ್ ರಾಜ್​ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಶನಿವಾರ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದೆ. 

ಟ್ವಿಟ್ಟರ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಇಂದು [ಶನಿವಾರ] ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣವನ್ನ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.

ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು [ಶನಿವಾರ] ಪ್ರತಾಪ್ ಸಿಂಹ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಬಾರದ ಹಿನ್ನೆಲೆ ವಾರೆಂಟ್ ಜಾರಿಗೊಳಿಸಲಾಗಿದೆ. 

ಪ್ರತಾಪ್​ ಸಿಂಹರನ್ನು ಸೋಮವಾರ ಖುದ್ದು ಬಂಧಿಸಿ ಕರೆತರುವಂತೆ ಮೈಸೂರು ಕಮೀಷನರ್ ಮೂಲಕ ವಾರೆಂಟ್ ತಲುಪಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್​ ಆದೇಶಿಸಿದ್ದಾರೆ.

ಇದೇ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್​​​​ ನೀಡಿದ್ದರೂ ಪ್ರತಾಪ್​ ಸಿಂಹ ಒಮ್ಮೆಯೂ ಕೋರ್ಟ್​ಗೆ ಹಾಜರಾಗಿರಲಿಲ್ಲ.

 

click me!