
ಕಲಬುರಗಿ (ಜ.18): ಊರಿಗೆ ಕೆರೆ ನಿರ್ಮಿಸಲು ತನ್ನ ಸ್ವಂತ ಜಮೀನು ನೀಡಿದ ರೈತನಿಗೆ ಹತ್ತು ವರ್ಷಗಳಾದರೂ ಪರಿಹಾರ ಸಿಕ್ಕಿಲ್ಲ.
ನ್ಯಾಯಾಲಯ ಮೊರೆ ಹೋದ ರೈತನಿಗೆ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಆದೇಶ ಸಿಕ್ಕಿತ್ತು.
ಆದರೆ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿಗೆ ತೆರಳಿದ ರೈತನಿಗೆ ಡಿ.ಸಿ.ಯವರು ಮತ್ತೊಂದು ವಾರ ಸಮಯಾವಕಾಶ ಕೇಳಿದ್ದಾರೆ.
ಕಲಬುರಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ಕೆರೆ ನಿರ್ಮಾಣಕ್ಕಾಗಿ ಜಿಲ್ಲಾಡಳಿತ ಬಡ ರೈತ ಪುರು ರಾಠೋಡ ಅವರಿಗೆ ಸೇರಿದ ಎರಡು ಎಕರೆ 38 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡಿತ್ತು.
ಆದರೆ ಅವರಿಗೆ ಬರಬೇಕಿದ್ದ ಹಣದಲ್ಲಿ ನಾಲ್ಕು ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿತ್ತು. ಕಳೆದ ಹತ್ತು ವರ್ಷಗಳಿಂದ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ ರೈತ ಹೋರಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.