
ಬೆಂಗಳೂರು, [ನ.14]: ಜೈ ಕರ್ನಾಟಕ ಅಧ್ಯಕ್ಷ ಮುತ್ತಪ್ಪ ರೈ ಅವರ ಶಸ್ತ್ರಾಸ್ತ್ರ ಪೂಜೆ ಪ್ರಕರಣದ ತನಿಖೆಯನ್ನ ನಡೆಸದಂತೆ 63ನೇ ಸೆಷನ್ಸ್ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಮುತ್ತಪ್ಪ ರೈ ಭದ್ರತೆ ನೀಡಿದ್ದ ಬ್ಲ್ಯಾಕ್ ಕ್ಯಾಟ್ ಸೆಕ್ಯೂರಿಟಿ ಏಜೆನ್ಸಿ, ಎಲ್ಲಾ ದಾಖಲೆಗಳು ಕಾನೂನು ಬದ್ದ ಎಂದು ತಿಳಿದು ಹಿನ್ನೆಲೆಯಲ್ಲಿ ಸಂಸ್ಥೆ ಮೇಲಿನ ತನಿಖೆಯನ್ನೂ ನಿಲ್ಲಿಸುವಂತೆ ನ್ಯಾಯಾಲಯ ಸಿಸಿಬಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಮುತ್ತಪ್ಪ ರೈ ಬೆನ್ನು ಬಿಡದ ‘ಆಯುಧ ಪೂಜೆ’ ಮತ್ತೊಂದು ಖಡಕ್ ದೂರು
ದಸರಾ ಆಯುಧ ಪೂಜೆ ದಿನ ಮುತ್ತಪ್ಪ ರೈ ಕತ್ತಿ, ಡ್ರ್ಯಾಗರ್, ರಿವಾಲ್ವರ್ ಇಟ್ಟು ಪೂಜೆ ಮಾಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಅವರನ್ನ ಕರಸಿ ವಿಚಾರಣೆ ನಡೆಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಕೋರ್ಟ್ ಮೆಟ್ಟಿಲೇರಿ, ತನಿಖೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.