
ಡೆಹ್ರಾಡೂನ್[ಜು.27]: ಉಸಿರಾಟದ ವೇಳೆ ಆಮ್ಲಜನಕವನ್ನು ಹೀರಿಕೊಂಡು ಮತ್ತು ಆಮ್ಲಜನಕವನ್ನೇ ಹೊರಬಿಡುವ ಏಕೈಕ ಪ್ರಾಣಿ ಗೋವು ಎಂದು ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೀಡಾಗಿದ್ದಾರೆ. ಮುಖ್ಯಮಂತ್ರಿ ರಾವತ್ ಅವರ ಈ ಹೇಳಿಕೆಯನ್ನು ಪಶುಸಂಗೋಪನಾ ತಜ್ಞರು ಅಲ್ಲಗಳೆದಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಗೋವಿನ ಹಾಲು ಮತ್ತು ಅದರ ಗಂಜಲದ ವೈದ್ಯಕೀಯ ಗುಣಗಳ ಬಗ್ಗೆ ರಾವತ್ ಅವರು ಕೊಂಡಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ಅದರಲ್ಲಿ ಗೋವುಗಳು ಉಸಿರಾಟದ ವೇಳೆ ಆಮ್ಲಜನಕವನ್ನು ಒಳಗೆಳೆದುಕೊಂಡು ಆಮ್ಲಜನಕವನ್ನೇ ಹೊರ ಬಿಡುತ್ತವೆ. ಗೋವಿನ ಜೊತೆಯೇ ಇರುವುದರಿಂದ ಕ್ಷಯ ರೋಗದಿಂದಲೂ ಮುಕ್ತಿ ಹೊಂದಬಹುದು. ಗೋವುಗಳ ಮೈ ಉಜ್ಜಿದರೆ ಉಸಿರಾಟ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ ಎಂದೆಲ್ಲಾ ರಾವತ್ ಹೇಳಿದ್ದಾರೆ.
ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿ ಈ ರೀತಿಯ ನಂಬಿಕೆ ಇದ್ದು, ಅದನ್ನೇ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಅವರ ಕಚೇರಿ ಸ್ಪಷ್ಟನೆ ನೀಡಿದೆ. ಆದರೆ ಪಶುಸಂಗೋಪನೆ ತಜ್ಞರು ರಾವತ್ ವಾದವನ್ನು ತಳ್ಳಿ ಹಾಕಿದ್ದಾರೆ. ಪ್ರತಿಯೊಂದು ಜೀವಿಯಂತೆಯೇ ಆಮ್ಲಜನಕವನ್ನು ಸೇವಿಸಿ, ಇಂಗಾಲದ ಡೈ ಆಕ್ಸೈಡ್ ಅನ್ನು ಗೋವು ಹೊರಬಿಡುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.