14 ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ‘ಸೈನಿಕ ’

Published : Jul 07, 2019, 11:18 AM ISTUpdated : Jul 07, 2019, 11:21 AM IST
14 ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ‘ಸೈನಿಕ ’

ಸಾರಾಂಶ

ಮೈತ್ರಿ ಪಾಳಯದ 14 ಶಾಸಕರ ರಾಜೀನಾಮೆ ಹಿಂದೆ ಇರುವುದು ಬಿಜೆಪಿಯ ಮಾಜಿ ಸಚಿವ. ಬಿಜೆಪಿ ಪಾಳಯದಲ್ಲಿ ಫುಲ್ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದು, ಸೈಲೆಂಟ್ ಆಗಿ ಖೆಡ್ಡಾ ತೋಡಿದ್ದಾರೆ. 

ಬೆಂಗಳೂರು [ಜು.07] : ಕಾಂಗ್ರೆಸ್ - ಜೆಡಿಎಸ್  ಮೈತ್ರಿ ಸರ್ಕಾರ ಬಹುತೇಕ ಪತನವಾಗುವ ಹಂತಕ್ಕೆ ಬಂದು ತಲುಪಿದೆ. 14 ಶಾಸಕರು ರಾಜೀನಾಮೆ ನೀಡಿದ್ದು, ತಲೆನೋವು ತಂದಿರಿಸಿದೆ.

ಈ ರಾಜೀನಾಮೆ ಹಿಂದೆ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಅವರು ಮುಖ್ಯ ಪಾತ್ರ ವಹಿಸಿದ್ದಾರೆ ಎನ್ನಲಾಗಿದ್ದು, ಎಚ್.ಡಿ.ಕುಮಾರಸ್ವಾಮಿ ಹಾಗೂ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್  ಅವರಿಗೆ ಟ್ರಬಲ್ ತಂದಿಟ್ಟಿದ್ದಾರೆ. 

ಮಾಜಿ ಸಚಿವ ಸಿಪಿ ಯೋಗೇಶ್ವರ್ ಸಖತ್ ಬ್ಯುಸಿಯಾಗಿದ್ದು, ಕಾಂಗ್ರೆಸ್ - ಜೆಡಿಎಸ್ ಶಾಸಕರ ಸಂಪರ್ಕಗಳಿಸಿ ಸರ್ಕಾರ ಕೆಡುವುವಲ್ಲಿ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.  

ಈ ಬಗ್ಗೆ ಸಿ.ಪಿ.ಯೋಗೇಶ್ವರ್ ಬೆಂಬಲಿಗರಿಂದ ಫೇಸ್ ಬುಕ್ ನಲ್ಲಿ  ಸಂಭ್ರಮ ವ್ಯಕ್ತವಾಗುತ್ತಿದ್ದು,  ಸಿ.ಪಿ.ಯೋಗೇಶ್ವರ್ ತಾಕತ್ತು ದೇಶಕ್ಕೆ ಗೊತ್ತು ಎಂದು ಪೋಸ್ಟ್ ಮಾಡಿದ್ದಾರೆ.  

ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸುವಾಗ ಜೊತೆಯಲ್ಲಿದ್ದ ಯೋಗೇಶ್ವರ್ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ವ ಕ್ಷೇತ್ರದಿಂದಲೇ ಟಾಂಗ್ ಕೊಟ್ಟಿದ್ದಾರೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?