
ಕೇರಳ (ನ.24): ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಒಡೆತನದ 'ನಿರಾಮಯ' ಎಂಬ ಹೆಸರಿನ ರೆಸಾರ್ಟ್ ಮೇಲೆ ಸಿಪಿಐ-ಎಂ ಕಾರ್ಯಕರ್ತರು ದಾಳಿ ನಡೆಸಿ ಸಾಕಷ್ಟು ಹಾನಿಗೊಳಿಸಿದ್ದಾರೆ. ಕುಮಾರಕೋಂ ಬಳಿ ಇರುವ ನಿರಾಮಯ ಎನ್ನುವ ರೆಸಾರ್ಟ್ ಮೇಲೆ ಸಿಪಿಐ (ಎಂ) ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ದಾಳಿಯಿಂದ ರೆಸಾರ್ಟ್'ಗೆ ವ್ಯಾಪಕ ಹಾನಿ ಸಂಭವಿಸಿದೆ ಎಂದು ಜುಪಿಟರ್ ಕ್ಯಾಪಿಟಲ್'ನ ಆಡಳಿತ ಮಂಡಳಿ ತಿಳಿಸಿದೆ.
ಡಿವೈಎಫ್'ಐ ಹಾಗೂ ಸಿಪಿ-ಎಂ ಯುವ ಕಾರ್ಯಕರ್ತರ ದಾಳಿಯಲ್ಲಿ 5 ವಿಲ್ಲಾಗಳು ಹಾನಿಗೊಳಗಾಗಿದ್ದು, ಕುರ್ಚಿ, ಟೇಬಲ್'ಗಳನ್ನು ಪುಡಿ ಪುಡಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಜನರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.