
ನವದೆಹಲಿ: 2019ರ ಲೋಕಸಭಾ ಚುನಾವಣೆಗೂ ಮುನ್ನ ಮಹಾ ಮೈತ್ರಿಕೂಟ ರಚಿಸಿಸುವ ಕಾಂಗ್ರೆಸ್ ಯತ್ನಕ್ಕೆ ಮತ್ತೊಂದು ಪೆಟ್ಟುಬಿದ್ದಿದೆ. ಚುನಾವಣೆಗೂ ಮುನ್ನು ಮೈತ್ರಿಕೂಟದ ಸಾಧ್ಯತೆ ಇಲ್ಲ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸ್ಪಷ್ಟಪಡಿಸಿದ್ದಾರೆ.
ಒಂದು ದೇಶವಾಗಿ ಭಾರತದ ಸ್ವರೂಪ ಮತ್ತು ಸ್ವಭಾವದ ಬಗ್ಗೆ ಅರ್ಥೈಸಿಕೊಳ್ಳಬೇಕು. ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ ಪ್ರಾದೇಶಿಕವಾಗಿ ಆಯಾ ಪಕ್ಷಗಳು ಮೇಲುಗೈ ಸಾಧಿಸುತ್ತವೆ.
ಹಾಗಾಗಿ, ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಪಕ್ಷಗಳನ್ನು ಒಂದಾಗಿರುವುದು ಸಾಧ್ಯವೇ ಇಲ್ಲ, ಎಂದಿದ್ದಾರೆ. ಇದಕ್ಕೂ ಮುನ್ನ ಬಿಎಸ್ಪಿ, ಎಸ್ಪಿ, ಟಿಎಂಸಿ, ಎನ್ಸಿಪಿ ನಾಯಕರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.