
ನವದೆಹಲಿ: ಕಮ್ಯೂನಿಸ್ಟ್ ಪಕ್ಷದ ನಾಯಕ ಸೀತರಾಮ್ ಯೆಚೂರಿ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಲು ಏ.ಕೆ.ಜಿ. ಭವನಕ್ಕೆ ಬಂದಿದ್ದ ಯೆಚೂರಿ ವಿರುದ್ಧ ಇಬ್ಬರು ದುಷ್ಕರ್ಮಿಗಳು ಮೊದಲಿಗೆ ಘೋಷಣೆಗಳನ್ನು ಕೂಗಿ, ಬಳಿಕ ಹಲ್ಲೆ ನಡೆಸಿದ್ದಾರೆ. ಆದರೆ ಯೆಚೂರಿ ಸುರಕ್ಷಿತರಾಗಿದ್ದಾರೆಂದು ಹೇಳಲಾಗಿದೆ.
ಹಲ್ಲೆ ನಡೆಸಿರುವುದಕ್ಕೆ ಪ್ರತಿಕ್ರಿಯಿಸಿದ ಯೆಚೂರಿ, ನಮ್ಮ ಧ್ವನಿಯನ್ನು ಹತ್ತಿಕ್ಕುವ ಸಂಘ ಪರಿವಾರದ ಗೂಂಡಾಗಳ ಿಂತಹ ಪ್ರಯತ್ನಗಳಿಗೆ ನಾವು ಹೆದರುವವರಲ್ಲವೆಂದು ಹೇಳಿದ್ದಾರೆ.
ಯೆಚೂರಿ ಮೇಲೆ ಹಲ್ಲೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ. ಯೆಚೂರಿ ಮೇಲೆ ನಡೆಸಲಾದ ಹಲ್ಲೆ ದೇಶದ ಪ್ರಜಾತಂತ್ರದ ಮೇಲೆ ಹಲ್ಲೆಯೆಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.