
ಕೋಲ್ಕತಾ: ಐಷಾರಾಮಿ ಜೀವನ ನಡೆಸುತ್ತಾರೆ ಎಂಬ ಕಾರಣಕ್ಕಾಗಿ ಸಿಪಿಎಂ ಸಂಸದ ರಿತಬ್ರತ ಬ್ಯಾನರ್ಜಿ ಅವರನ್ನು ಪಕ್ಷವು 3 ತಿಂಗಳ ಮಟ್ಟಿಗೆ ಅಮಾನತು ಮಾಡಿದ ಅಪರೂಪದ ಪ್ರಸಂಗ ಶುಕ್ರವಾರ ನಡೆದಿದೆ.
ಬ್ಯಾನರ್ಜಿ ಅವರು ಐಷಾರಾಮಿ ವಾಚು, ಪೆನ್ನು, ಮೊಬೈಲ್ ಇತ್ಯಾದಿಗಳನ್ನು ಬಳಸುತ್ತಾರೆ ಎಂಬ ಆರೋಪ ಇದ್ದು, ಇದು ಪಕ್ಷದ ಸರಳತೆ, ತತ್ವ-ಆದರ್ಶಗಳಿಗೆ ವಿರುದ್ಧವಾಗಿದೆ. ಹೀಗಾಗಿ ಇವರನ್ನು ಅಮಾನತಿನಲ್ಲಿರಿಸಲಾಗಿದೆ.
ಕಳೆದ ಫೆಬ್ರವರಿಯಲ್ಲಿ ಬ್ಯಾನರ್ಜಿ ಅವರು ದುಬಾರಿ ಬೆಲೆಯ ಮಾಂಟ್ ಬ್ಲ್ಯಾಂಕ್ ಪೆನ್ನು ಹಾಗೂ ಆ್ಯಪಲ್ ಸ್ಮಾರ್ಟ್ ವಾಚು ಧರಿಸಿದ್ದು ಫೋಟೋವೊಂದರಿಂದ ಬಹಿರಂಗವಾಗಿತ್ತು. ಬಳಿಕ ಪಕ್ಷದ ಕಾರ್ಯಕರ್ತರೊಬ್ಬರು ಸಂಸದನ ವಿರುದ್ಧ ದೂರು ದಾಖಲಿಸಿದ್ದರು.
ಇಲ್ಲಿ ನಡೆದ ಪಕ್ಷದ ರಾಜ್ಯ ಸಮಿತಿ ಸಭೆಯಲ್ಲಿ ಪಾಲಿಟ್ಬ್ಯೂರೋ ಸದಸ್ಯ ಸೂರ್ತಕಾಂತ ಮಿಶ್ರಾ, ಬ್ಯಾನ ರ್ಜಿ ಅಮಾನತು ವಿಷಯ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.