
ನವದೆಹಲಿ: ಗಂಭೀರ ದುರ್ನಡತೆ ತೋರಿದ್ದಾರೆ ಎಂಬ ಆರೋಪದ ಮೇರೆಗೆ ಜಿ.ವಿ. ಶ್ರೀರಾಮರೆಡ್ಡಿ ಅವರನ್ನು ಸಿಪಿಎಂನ ಕೇಂದ್ರೀಯ ಸಮಿತಿ ಮತ್ತು ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆ ಸೇರಿದಂತೆ ಎಲ್ಲ ಸ್ಥಾನಗಳಿಂದ ಉಚ್ಚಾಟಿಸಲಾಗಿದೆ ಎಂದು ಸಿಪಿಎಂ ತಿಳಿಸಿದೆ.
ಆದರೆ, ಶ್ರೀರಾಮರೆಡ್ಡಿ ಅವರು ಯಾವ ರೀತಿಯ ದುರ್ನಡತೆ ತೋರಿದರು ಎಂಬುದರ ಮಾಹಿತಿಯನ್ನು ಸಿಪಿಎಂ ಹೊರಗೆಡವಿಲ್ಲ.
ಈ ಬಗ್ಗೆ ಗುರುವಾರ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಎಂ, ‘2018ರ ಡಿಸೆಂಬರ್ 15, 16ರಂದು ನಡೆದ ಕಮ್ಯೂನಿಸ್ಟ್ ಪಕ್ಷದ ಕೇಂದ್ರೀಯ ಸಮಿತಿ ಸಭೆಯಲ್ಲಿ ಜಿ.ವಿ. ಶ್ರೀರಾಮರೆಡ್ಡಿ ಅವರ ವಿರುದ್ಧ ಗಂಭೀರ ದುರ್ನಡತೆ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ, ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ವಜಾ ಮಾಡಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.