
ನವದೆಹಲಿ: ಆಂಧ್ರಪ್ರದೇಶ ವೈಎಸ್ಆರ್ ಕಾಂಗ್ರೆಸ್, ತೆಲಗು ದೇಶಂ ಪಕ್ಷ ಮತ್ತು ಕಾಂಗ್ರೆಸ್ ಬಳಿಕ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಸಹ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ.
ಸಿಪಿಎಂ ಪಕ್ಷದ ಲೋಕಸಭಾ ನಾಯಕ ಪಿ.ಕರುಣಾಕರನ್ ಅವರು ಸೋಮವಾರ ಈ ಕುರಿತಾದ ನೋಟಿಸ್ ಅನ್ನು ಲೋಕಸಭೆ ಕಾರ್ಯದರ್ಶಿ ಅವರಿಗೆ ಸಲ್ಲಿಕೆ ಮಾಡಿದ್ದು, ಮಂಗಳವಾರದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡಬೇಕು ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಲ್ಲಿ ಕೋರಿಕೊಳ್ಳಲಾಗಿದೆ.
ಲೋಕಸಭೆಯಲ್ಲಿ ಎನ್ಡಿಎ ಸರ್ಕಾರದ ಮೇಲೆ ಒತ್ತಡ ಹೇರುವ ಭಾಗವಾಗಿ ಈ ತಂತ್ರ ಅನುಸರಿಸಲಾಗುತ್ತಿದೆ ಎಂದು ಸಿಪಿಎಂ ಸಂಸದರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.